ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಉದಯ ನ್ಯೂಸ್ ಸಿಬ್ಬಂದಿಗಳಿಗೆ ಸಂಚಕಾರ..!
ಕಳೆದ ಐದು ವರ್ಷಗಳಲ್ಲಿ 3,834.95 ಕೋಟಿ ನಿವ್ವಳ ಲಾಭ ಗಳಿಸಿದ ಸನ್ ನೆಟ್ವರ್ಕ್ ತನ್ನ ಅಂಗ ಸಂಸ್ಥೆ ‘ಉದಯ ನ್ಯೂಸ್’ನ್ನು ಮುಚ್ಚಲು ತೀರ್ಮಾನಿಸಿದೆ. ನಷ್ಟದ ಕಾರಣವನ್ನು ಮುಂದಿಟ್ಟ ಸಂಸ್ಥೆಯ ಮಾಲೀಕ ಕಲಾನಿಧಿ ಮಾರನ್ 73 ಸಿಬ್ಬಂದಿಗಳ ಉದ್ಯೋಗ ಖಾತ್ರಿಯನ್ನು ಕಿತ್ತುಕೊಳ್ಳಲು ಮೂರು ತಿಂಗಳ ಕಾಲಾವಕಾಶ ನಿಗದಿ ಮಾಡಿದ್ದಾರೆ. ಕಾರ್ಪೊರೇಟ್ ಭ್ರಮೆಯಲ್ಲಿ ಮಿಂದೇಳುತ್ತಿರುವ ದೇಶದಲ್ಲಿ, ಬೃಹತ್ ಕಾರ್ಪೊರೇಟ್ ಮಾಧ್ಯಮ ಸಂಸ್ಥೆಯೊಂದು ಹೇಗೆ ತನ್ನ ಸಿಬ್ಬಂದಿಗಳನ್ನು ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ.
ಕರ್ನಾಟಕದ ಮೊದಲ ಖಾಸಗಿ ಚಾನೆಲ್…
ಕರ್ನಾಟಕದ ಖಾಸಗಿ ಟಿವಿ ವಲಯಕ್ಕೆ ಮೊದಲು ಕಾಲಿಟ್ಟಿದ್ದು ಉದಯ ಟಿವಿ. ಸುಮಾರು 19 ವರ್ಷಗಳ ಹಿಂದೆ ರಾಜ್ಯದಲ್ಲಿ ಡಿಡಿ 1 ಹಾಗೂ ಚಂದನ ವಾಹಿನಿಗಳು ನೀಡುತ್ತಿದ್ದ ಮನೋರಂಜನೆಯನ್ನು ಸ್ಥಿತ್ಯಂತರಗೊಳಿಸಿದ್ದು ತಮಿಳುನಾಡು ಮೂಲದ ‘ಸನ್ ನೆಟ್ವರ್ಕ್’ ಮಾಧ್ಯಮ ಸಂಸ್ಥೆ. ಉದಯ ಟಿವಿ ಹೆಸರಿನಲ್ಲಿ ಅದು ಮೊದಲು ತನ್ನ ಕಾರ್ಯಾಚರಣೆ ಶುರು ಮಾಡುತ್ತಿದ್ದಂತೆ ಜನ ಕೂಡ ಹೊಸ ಮಾದರಿಯ ಮನೋರಂಜನೆಗೆ ಒಗ್ಗಿಕೊಂಡರು. ಅಲ್ಲಿಂದ ಸುಮಾರು ಒಂದೂವರೆ ದಶಕಗಳ ಕಾಲ ಕರ್ನಾಟಕದ ಮನೋರಂಜನಾ ಲೋಕದ ಅನಭಿಷಕ್ತ ದೊರೆಯಾಗಿ ಉದಯ ಟಿವಿ ಆಳ್ವಿಕೆ ನಡೆಸಿತು.
ಹೀಗಿರುವಾಗಲೇ, 2000ನೇ ಇಸವಿಯಲ್ಲಿ ನಟ ರಾಜ್ ಕುಮಾರ್ ಅಪಹರಣ ಪ್ರಕರಣ ನಡೆಯಿತು. ತನ್ನ ಬಳಿ ಇದ್ದ ಸುದ್ದಿ ವಾಹಿನಿಯ ಪರವಾನಗಿಯನ್ನು ಅನುಷ್ಠಾನಕ್ಕೆ ಇಳಿಸಲು ‘ಸನ್ ನೆಟ್ವರ್ಕ್’ ಮುಂದಾಯಿತು. ಹಾಗೆ ತರಾತುರಿಯಲ್ಲಿ ಆರಂಭಗೊಂಡಿದ್ದು ‘ಉದಯ ನ್ಯೂಸ್’. “ಅವತ್ತು ಹೆಚ್ಚಿನ ಸಿದ್ದತೆಗಳೂ ಇರಲಿಲ್ಲ.
ಉದಯ ಮನೋರಂಜನಾ ವಾಹಿನಿಯಲ್ಲಿದ್ದ ಸಿಬ್ಬಂದಿಗಳನ್ನೇ ಹೊಸ ನ್ಯೂಸ್ ಚಾನಲ್ಗೆ ವರ್ಗಾವಣೆ ಮಾಡಲಾಯಿತು. ತಾಂತ್ರಿಕ ಉಪಕರಣಗಳನ್ನು ಎರವಲು ಪಡೆಯಲಾಯಿತು. ಮೊನ್ನೆ ಮೊನ್ನೆವರೆಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಮಾಡಲು ಒದ್ದಾಡುತ್ತಿದ್ದೆವು. ಈಗಿರುವುದು 3 ವಿಡಿಯೋ ಎಡಿಟರ್ಗಳು, ಡೆಸ್ಕ್ನಲ್ಲಿ ಐವರು ಸಿಬ್ಬಂದಿ. ಕಳಪೆ ಮಟ್ಟದ ಸೌಕರ್ಯ ನೀಡಿ ರೇಟಿಂಗ್ ತನ್ನಿ ಎಂದರೆ ಹೇಗೆ ಸಾಧ್ಯ?” ಎನ್ನುತ್ತಾರೆ ಉದಯ ನ್ಯೂಸ್ ಹಿರಿಯ ಸಿಬ್ಬಂದಿಯೊಬ್ಬರು.
ಇವತ್ತಿಗೂ ಕಡಿಮೆ ಖರ್ಚಿನಲ್ಲಿ ನಡೆಯುತ್ತಿರುವ ಸುದ್ದಿವಾಹಿನಿ…
ಇವತ್ತಿಗೆ ಡಜನ್ ಸಂಖ್ಯೆ ಮುಟ್ಟಿರುವ ಕನ್ನಡದ ಸುದ್ದಿ ವಾಹಿನಿಗಳ ಪೈಕಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಕಾರ್ಯಚರಣೆ ನಡೆಸುತ್ತಿರುವುದು ‘ಉದಯ ನ್ಯೂಸ್’. ಇಲ್ಲಿನ ಆಂತರಿಕ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, “ಪ್ರತಿ ತಿಂಗಳು ಸುದ್ದಿ ವಾಹಿನಿಗೆ ಖರ್ಚಾಗುತ್ತಿರುವುದು 25 ಲಕ್ಷ ರೂಪಾಯಿಗಳು. ಇದರಲ್ಲಿ ಸಂಸ್ಥೆಯಲ್ಲಿರುವ 73 ಸಿಬ್ಬಂದಿಗಳಿಗೆ ಸಂಬಳ ರೂಪದಲ್ಲಿ ವೆಚ್ಚ ಮಾಡುತ್ತಿದ್ದದ್ದು 13 ಲಕ್ಷ. ಜತೆಗೆ ಇದಕ್ಕೆ ಪ್ರತ್ಯೇಕವಾದ ಮಾರ್ಕೆಟಿಂಗ್ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ.”
ಚಾನಲ್ ಮುಚ್ಚುವ ಬಗ್ಗೆ ಸಂಸ್ಥೆ ಲೇಬರ್ ಕಮಿಷನರ್ ಗೆ ಬರೆದ ಪತ್ರ:-
ಕಳೆದ ನಾಲ್ಕು ವರ್ಷಗಳಿಂದ ‘ಉದಯ ನ್ಯೂಸ್’ ಮುಚ್ಚಲಾಗುತ್ತಂತೆ ಅನ್ನುವ ವರ್ತಮಾನ ಇಲ್ಲಿನ ಸಿಬ್ಬಂದಿಗಳಿಗೆ ಸಾಮಾನ್ಯ ಸಂಗತಿಯಾಗಿ ಬದಲಾಗಿತ್ತು. ಮೊದಲು ಬಾಯ್ಮಾತಿನಲ್ಲಿ, ಗಾಳಿ ಸುದ್ದಿ ರೂಪದಲ್ಲಿದ್ದ ಈ ಸುದ್ದಿ ಇತ್ತೀಚೆಗೆ ‘ಸನ್ ನೆಟ್ವರ್ಕ್’ ಕಡೆಯಿಂದ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮತ್ತು ಕಾರ್ಮಿಕ ಸಚಿವಾಲಯಕ್ಕೆ ಸಲ್ಲಿಸಿದ ‘ಫಾರ್ಮ್ ಕ್ಯೂ’ ರೂಪದಲ್ಲಿ ವಾಸ್ತವದ ಸ್ವರೂಪ ಪಡೆದುಕೊಂಡಿದೆ.
ಕಾರ್ಮಿಕ ವಿವಾದಗಳ ಕಾಯ್ದೆ ಪ್ರಕಾರ 50 ಜನ ಮೀರಿರುವ ಸಂಸ್ಥೆಯನ್ನು ಮುಚ್ಚುವ ಮುನ್ನ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕಿದೆ. ಇದನ್ನೀಗ ‘ಸನ್ ನೆಟ್ವರ್ಕ್’ ಪಾಲಿಸಿದೆ. ಜತೆಗೆ, ‘ಸಾಕಷ್ಟು ಬಂಡವಾಳ ಹೂಡಿಕೆ ಮಾಡಿದರೂ, ನಷ್ಟದಲ್ಲಿರುವ ಸಂಸ್ಥೆ’ಯನ್ನು ಮುಚ್ಚುವುದಾಗಿ ಕಾರಣವನ್ನೂ ನೀಡಿದೆ.
“ಮಾರನ್ ದಂಪತಿ ಸಂಸ್ಥೆಯಿಂದ ಪಡೆದ ಸಂಬಳ, ಭತ್ಯೆಗಳಿಗೆ ಹೋಲಿಸಿದರೆ ಉದಯ ನ್ಯೂಸ್ ಕಾರ್ಯಾಚರಣೆಗೆ ಖರ್ಚಾಗುತ್ತಿರುವುದು ಅತ್ಯಂತ ಕಡಿಮೆ ಹಣ.
ಮಾರನ್ ಮಗಳ ಪಾಕೆಟ್ ಮನಿಯಲ್ಲಿ ಈ ವಾಹಿನಿಯನ್ನು ಮುನ್ನಡೆಸಬಹುದು,” ಎನ್ನುತ್ತಾರೆ ವಾಹಿನಿಯ ಜತೆ ಹಲವು ವರ್ಷಗಳ ಒಡನಾಟ ಹೊಂದಿರುವ ಪತ್ರಕರ್ತರೊಬ್ಬರು.
ಮುಂದೆ ಏನಾಗಬಹುದು…
2010ರಲ್ಲಿ ಕರ್ನಾಟಕದಲ್ಲಿಯೂ ಉದಯ ಟಿವಿ ಸಿಬ್ಬಂದಿ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿದ್ದರು. “ಆ ದಿನಗಳಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದೆವು. ನಮ್ಮ ನಾಯಕತ್ವವಹಿಸಿಕೊಂಡ ಕೆಲವರು ಕೊನೆಗೆ ಆಡಳಿತ ಮಂಡಳಿ ಜತೆ ಒಳ ಒಪ್ಪಂದ ಮಾಡಿಕೊಂಡು ಉದ್ಯೋಗಿಗಳನ್ನು ನಡು ನೀರಿನಲ್ಲಿ ಕೈಬಿಟ್ಟರು. ಹೀಗಾಗಿ ಈ ಬಾರಿ ಏನಾಗುತ್ತೆ ಎಂದು ಹೇಳಲು ಸಾಧ್ಯವಿಲ್ಲ.
ಈಗ ನೋಟಿಸ್ ನೀಡಿರುವುದನ್ನು ನೋಡಿದರೆ, ಆಡಳಿತ ಮಂಡಳಿ ಉದ್ಯೋಗಿಗಳ ಮುಂದಿನ ನಡೆ ಏನು ಎಂಬುದನ್ನು ಗಮನಿಸುವ ತಂತ್ರವೂ ಆಗಿರಬಹುದು. ಇಲ್ಲಿ 73 ಸಿಬ್ಬಂದಿಗಳಿದ್ದರೂ ಪೂರ್ಣ ಪ್ರಮಾಣದ ಸಿಬ್ಬಂದಿಗಳ ಸಂಖ್ಯೆ 20 ದಾಟುವುದಿಲ್ಲ,” ಎನ್ನುತ್ತಾರೆ ಉಯದ ನ್ಯೂಸ್ ನ ಮತ್ತೊಬ್ಬ ಹಿರಿಯ ಉದ್ಯೋಗಿ ಒಬ್ಬರು.
ಒಂದು ಬೃಹತ್ ಕಾರ್ಪೊರೇಟ್ ಸಂಸ್ಥೆ, ವರ್ಷದಿಂದ ವರ್ಷಕ್ಕೆ ನಿವ್ವಳ ಲಾಭವನ್ನು ಘೋಷಿಸಿಕೊಂಡು ಬರುತ್ತಿರುವ ಸಾಮ್ರಾಜ್ಯ, ಕೋಟಿ ಲೆಕ್ಕದಲ್ಲಿ ಸಂಬಳ, ಭತ್ಯೆಗಳನ್ನು ಪಡೆಯುವ ಅದರ ಮಾಲೀಕರು ಹೀಗೆ ಕೆಳಹಂತದ ವಿಚಾರದಲ್ಲಿ ಹೀನಾಯವಾಗಿ ನಡೆದುಕೊಳ್ಳುತ್ತಾರೆ ಎಂಬುದನ್ನು ಈ ಬೆಳವಣಿಗೆ ಸ್ಪಷ್ಟವಾಗಿ ಬಿಡಿಸಿಡುತ್ತಿದೆ.
ಸುದ್ದಿವಲಯದ ಸಹೋದ್ಯೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು..?
ಊರ ತುಂಬಾ ಅನ್ಯಾಯಗಳು ನಡೆದಾಗ ಧ್ವನಿ ಎತ್ತುತ್ತೀವಿ ಎನ್ನುವ ಮಾಧ್ಯಮಗಳು, ತಮ್ಮದೇ ವಲಯದ ಸಹೋದ್ಯೋಗಿಗಳು ಸಂಕಷ್ಟಕ್ಕೆ ಸಿಕ್ಕಾಗ ಮೌನಕ್ಕೆ ಶರಣಾಗುತ್ತವೆ. ಇದಕ್ಕಿಂತ ಕ್ರೂರವಾದುದ್ದು ಏನೆಂದರೆ, ಒಂದು ವೇಳೆ ಅನ್ಯಾಯವನ್ನು ಪ್ರಶ್ನಿಸಿದರೆ, ಅಂತಹ ಪತ್ರಕರ್ತರನ್ನು ಹಣಿಯುವ ಮಟ್ಟಕ್ಕೂ ಇಳಿದು ಬಿಡುತ್ತಾರೆ. ಇಂತಹ ಅಸಹ್ಯಕರ ಇತಿಹಾಸಗಳನ್ನು ಹೊಂದಿರುವ ಕನ್ನಡ ಸುದ್ದಿ ವಾಹಿನಿಗಳ ಲೋಕದಲ್ಲಿ ಈಗ ಅಭದ್ರತೆಯ ಭಾವಗಳನ್ನು ‘ಉದಯ ನ್ಯೂಸ್’ ಸಿಬ್ಬಂದಿಗಳು ಎದುರಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.