News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

51

ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.

ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.



ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು

ಮಧುಮೇಹದ ಅಪಾಯ ತಗ್ಗಿಸುವುದು

ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.

ಕ್ಯಾನ್ಸರ್ ವಿರುದ್ಧ ಹೋರಾಡುವುದು

ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಕರ್ನಾಟಕದ ಸಾಧಕರು, ದೇಗುಲ ದರ್ಶನ

    ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

    ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…