News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

51

ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.

ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.



ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.

ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು

ಮಧುಮೇಹದ ಅಪಾಯ ತಗ್ಗಿಸುವುದು

ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.

ಕ್ಯಾನ್ಸರ್ ವಿರುದ್ಧ ಹೋರಾಡುವುದು

ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…