ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…