News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ, ಸ್ಪೂರ್ತಿ

ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

497

ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…