ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…