ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ.

ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ ಈ ಮೀನುಗಳು ಎಲ್ಲೆಡೆ ವ್ಯಾಪಿಸುತ್ತಿದ್ದು, ಅತ್ಯಂತ ವಿಷಕಾರಿಯಾಗಿವೆ ಎಂದು ತಿಳಿದುಬಂದಿದೆ . ಈ ಮೀನುಗಳು ಇರುವ ಪ್ರದೇಶಗಳಲ್ಲಿ ಇತರೆ ಮೀನುಗಳು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ ಮೀನಿನ ಕ್ಷಾಮ ಎದುರಾಗುತ್ತಿದೆ ಎಂದು ಮೀನುಗಾರರು ತಮ್ಮ ಆತಂಕ ವನ್ನು ವ್ಯಕ್ತಪಡಿಸಿದ್ದಾರೆ.

ಮೀನುಗಾರಿಕೆಗೆ ಹೊರಟ ಮೀನುಗಾರರಿಗೆ ಕಳೆದ ಒಂದು ವಾರದಿಂದ ಕೇವಲ ಕಾರ್ಗಿಲ್ ಮೀನುಗಳು ಸಿಗುತ್ತಿದ್ದು, ಇತರೆ ಮೀನುಗಳ ಸಂಗ್ರಹವಾಗುತ್ತಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ಆರ್ಥಿಕವಾಗಿ ತುಂಬಾ ನಷ್ಟವನ್ನು ಅನುಭವಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ . ಸಾವಿರಾರು ರೂಗಳ . ಇಂಧನ ವ್ಯಯಿಸಿ ಮೀನುಗಾರಿಕೆಗೆ ತೆರಳಿ ಬರಿಗೈಯಲ್ಲಿ ಹಿಂದಿರುಗುವಂತಾಗಿದೆ ಎಂದು ಮೀನುಗಾರರು ಪ್ರತಿಕ್ರಿಯಿಸಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ಈ ಬಾರಿ ಗಾಳಿಯ ರಭಸ ತುಂಬಾ ಹೆಚ್ಚಾಗಿದ್ದು, ಗಾಳಿಯ ಚಲನೆ ಅತಿ ವೇಗವಾಗಿದೆ. ಹೀಗಾಗಿ ಲಕ್ಷದ್ವೀಪಗಳಲ್ಲಿ ಇರುವ ಕಾರ್ಗಿಲ್ ಮೀನುಗಳು ಉತ್ತರ ದಿಕ್ಕಿನತ್ತ ಚಲಿಸುತ್ತಿದ್ದು, ಈ ಮೀನುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿವೆ. ಮೊದಲೇ ಮೀನಿನ ಕ್ಷಾಮದಿಂದ ಭಯಭೀತರಾಗಿರುವ ಮೀನುಗಾರರು ಮತ್ತಷ್ಟು ಚಿಂತಾಕ್ರಾಂತರಾಗಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…