News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

115

ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ.

ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ ಈ ಮೀನುಗಳು ಎಲ್ಲೆಡೆ ವ್ಯಾಪಿಸುತ್ತಿದ್ದು, ಅತ್ಯಂತ ವಿಷಕಾರಿಯಾಗಿವೆ ಎಂದು ತಿಳಿದುಬಂದಿದೆ . ಈ ಮೀನುಗಳು ಇರುವ ಪ್ರದೇಶಗಳಲ್ಲಿ ಇತರೆ ಮೀನುಗಳು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ ಮೀನಿನ ಕ್ಷಾಮ ಎದುರಾಗುತ್ತಿದೆ ಎಂದು ಮೀನುಗಾರರು  ತಮ್ಮ  ಆತಂಕ ವನ್ನು ವ್ಯಕ್ತಪಡಿಸಿದ್ದಾರೆ.

ಮೀನುಗಾರಿಕೆಗೆ ಹೊರಟ  ಮೀನುಗಾರರಿಗೆ ಕಳೆದ  ಒಂದು  ವಾರದಿಂದ ಕೇವಲ ಕಾರ್ಗಿಲ್‌ ಮೀನುಗಳು ಸಿಗುತ್ತಿದ್ದು, ಇತರೆ ಮೀನುಗಳ ಸಂಗ್ರಹವಾಗುತ್ತಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ಆರ್ಥಿಕವಾಗಿ ತುಂಬಾ  ನಷ್ಟವನ್ನು  ಅನುಭವಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ . ಸಾವಿರಾರು ರೂಗಳ . ಇಂಧನ ವ್ಯಯಿಸಿ ಮೀನುಗಾರಿಕೆಗೆ ತೆರಳಿ ಬರಿಗೈಯಲ್ಲಿ ಹಿಂದಿರುಗುವಂತಾಗಿದೆ ಎಂದು ಮೀನುಗಾರರು ಪ್ರತಿಕ್ರಿಯಿಸಿದ್ದಾರೆ.

 ಅರಬ್ಬೀ ಸಮುದ್ರದಲ್ಲಿ ಈ ಬಾರಿ ಗಾಳಿಯ ರಭಸ ತುಂಬಾ ಹೆಚ್ಚಾಗಿದ್ದು, ಗಾಳಿಯ ಚಲನೆ ಅತಿ ವೇಗವಾಗಿದೆ. ಹೀಗಾಗಿ ಲಕ್ಷದ್ವೀಪಗಳಲ್ಲಿ ಇರುವ ಕಾರ್ಗಿಲ್‌ ಮೀನುಗಳು ಉತ್ತರ ದಿಕ್ಕಿನತ್ತ ಚಲಿಸುತ್ತಿದ್ದು, ಈ ಮೀನುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿವೆ. ಮೊದಲೇ ಮೀನಿನ ಕ್ಷಾಮದಿಂದ ಭಯಭೀತರಾಗಿರುವ ಮೀನುಗಾರರು ಮತ್ತಷ್ಟು ಚಿಂತಾಕ್ರಾಂತರಾಗಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಕರ್ನಾಟಕ

    ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

    ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಸುದ್ದಿ

    ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

    ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ…