News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

117

ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ.

ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ ಈ ಮೀನುಗಳು ಎಲ್ಲೆಡೆ ವ್ಯಾಪಿಸುತ್ತಿದ್ದು, ಅತ್ಯಂತ ವಿಷಕಾರಿಯಾಗಿವೆ ಎಂದು ತಿಳಿದುಬಂದಿದೆ . ಈ ಮೀನುಗಳು ಇರುವ ಪ್ರದೇಶಗಳಲ್ಲಿ ಇತರೆ ಮೀನುಗಳು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ ಮೀನಿನ ಕ್ಷಾಮ ಎದುರಾಗುತ್ತಿದೆ ಎಂದು ಮೀನುಗಾರರು  ತಮ್ಮ  ಆತಂಕ ವನ್ನು ವ್ಯಕ್ತಪಡಿಸಿದ್ದಾರೆ.

ಮೀನುಗಾರಿಕೆಗೆ ಹೊರಟ  ಮೀನುಗಾರರಿಗೆ ಕಳೆದ  ಒಂದು  ವಾರದಿಂದ ಕೇವಲ ಕಾರ್ಗಿಲ್‌ ಮೀನುಗಳು ಸಿಗುತ್ತಿದ್ದು, ಇತರೆ ಮೀನುಗಳ ಸಂಗ್ರಹವಾಗುತ್ತಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ಆರ್ಥಿಕವಾಗಿ ತುಂಬಾ  ನಷ್ಟವನ್ನು  ಅನುಭವಿಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ . ಸಾವಿರಾರು ರೂಗಳ . ಇಂಧನ ವ್ಯಯಿಸಿ ಮೀನುಗಾರಿಕೆಗೆ ತೆರಳಿ ಬರಿಗೈಯಲ್ಲಿ ಹಿಂದಿರುಗುವಂತಾಗಿದೆ ಎಂದು ಮೀನುಗಾರರು ಪ್ರತಿಕ್ರಿಯಿಸಿದ್ದಾರೆ.

 ಅರಬ್ಬೀ ಸಮುದ್ರದಲ್ಲಿ ಈ ಬಾರಿ ಗಾಳಿಯ ರಭಸ ತುಂಬಾ ಹೆಚ್ಚಾಗಿದ್ದು, ಗಾಳಿಯ ಚಲನೆ ಅತಿ ವೇಗವಾಗಿದೆ. ಹೀಗಾಗಿ ಲಕ್ಷದ್ವೀಪಗಳಲ್ಲಿ ಇರುವ ಕಾರ್ಗಿಲ್‌ ಮೀನುಗಳು ಉತ್ತರ ದಿಕ್ಕಿನತ್ತ ಚಲಿಸುತ್ತಿದ್ದು, ಈ ಮೀನುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿವೆ. ಮೊದಲೇ ಮೀನಿನ ಕ್ಷಾಮದಿಂದ ಭಯಭೀತರಾಗಿರುವ ಮೀನುಗಾರರು ಮತ್ತಷ್ಟು ಚಿಂತಾಕ್ರಾಂತರಾಗಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • ಸುದ್ದಿ

    ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

    ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…