News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ಮನರಂಜನೆ

ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

360

ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ  ಬಂದಿದ್ದಾರೆ.

 

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ  ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

 

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ  ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ  ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು  ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-

ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…

 ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು  ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ಉಪಯುಕ್ತ ಮಾಹಿತಿ

    ಈ ಜಾಗಗಳಲ್ಲಿ ಮೊಬೈಲ್ ಫೋನ್ ಗಳನ್ನು ಇಟ್ಟು ಕೊಳ್ಳಲೇಬೇಡಿ…

    ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….