ಮನರಂಜನೆ

ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

360

ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ  ಬಂದಿದ್ದಾರೆ.

 

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ  ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

 

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ  ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ  ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು  ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-

ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…

 ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು  ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…

  • ಸುದ್ದಿ

    ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

    ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.