ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .
ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…