News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

826

ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಈ ರೀತಿಯ ಪ್ರಕರಣಗಳಿಗೆ ಪರಿಹಾರ ಎಲ್ಲಿದೆ..?

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ  ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಪಿಂಚಣಿಯೂ ನಿಂತು ಬಿಟ್ಟಿದೆ…

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.

ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್‌ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .

 

ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಸುದ್ದಿ

    ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

    ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ  ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…