ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್ ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.
ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.
ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ. ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.
ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.
ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.
ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….