ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್ ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.
ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.
ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ. ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.
ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.
ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.
ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…