ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್ ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.
ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.
ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ. ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.
ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.
ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.
ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….