ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್ ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.
ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.
ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ. ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.
ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.
ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.
ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…