News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

1129

ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್  ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.

ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.

ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ.  ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.

ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.

ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.

ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…

  • ವಿಚಿತ್ರ ಆದರೂ ಸತ್ಯ

    27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

    ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…