ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್ ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.
ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.
ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ. ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.
ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.
ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.
ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.