ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು.
ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.
* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ .

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.
* ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ.
* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…