ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳ ಪಟ್ಟಿ :-
1) ಪ್ರಾಚೀನ ಭಾರತದ ಇತಿಹಾಸ – ಭಾರತ ಸರ್ಕಾರದ ಪ್ರಚಾರ ವಿಭಾಗ
2) ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಸಮಗ್ರ ಇತಿಹಾಸ – ಎಚ್.ಎನ್.ಬಸವರಾಜ
3) ಸಮಗ್ರ ಭಾರತದ ಇತಿಹಾಸ – ಡಾ|| ಕೆ.ಸದಾಶಿವ
4) ಕರ್ನಾಟಕ ಪರಂಪರೆ ಭಾಗ -೧
5) ಕರ್ನಾಟಕ ಪರಂಪರೆ ಭಾಗ -೨ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಪ್ರಕಟಿತ)
6) ಸ್ವತಂತ್ರ ಭಾರತ -1942 ರಿಂದ 2010 – ಪಾಲಾಕ್ಷ
7) ಆಧುನಿಕ ಭಾರತದ ಇತಿಹಾಸ – ಲೇ : ಕೆ.ನಾರಾಯಣ (ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪುಸ್ತಕ)
8) ಕರ್ನಾಟಕ ಇತಿಹಾಸ – ಕೆ.ನಾರಾಯಣ
9) ಸ್ವತಂತ್ರ ಭಾರತ – ಕೆ.ನಾರಾಯಣ
10) ಕರ್ನಾಟಕ ಇತಿಹಾಸ – ಕ್ರಿ.ಶ. 1800-1956
11) ನಮ್ಮ ನಾಡು ಕರ್ನಾಟಕ – ಎಚ್.ಎಸ್.ಗೋಪಾಲರಾವ್12 ಸಮಗ್ರ ಕರ್ನಾಟಕ – ಪಾಲಾಕ್ಷ
13) ಕರ್ನಾಟಕ ಪ್ರವಾಸಿ ತಾಣಗಳು – ಶೇಷುನಾಥನ್ (ಸಾಧನಾ ಪ್ರಕಾಶನ ಬೆಂಗಳೂರು)
14) ಕರ್ನಾಟಕ ಕೈಗನ್ನಡಿ – ಸೂರ್ಯನಾಥ ಕಾಮತ್
15) ಪೂರ್ವ ಇತಿಹಾಸ – ಇರ್ಫಾನ್ ಹಬೀಬ್ (ಚಿಂತನ ಪ್ರಕಾಶನ, ಶಿರಸಿ)
16) ಸಾಮಾನ್ಯ ಭಾರತದ ಅರ್ಥಶಾಸ್ತ್ರ – ನೇ.ತಿ. ಸೋಮಶೇಖರ (ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪುಸ್ತಕ)
17) ಭಾರತ ಸಂವಿಧಾನ – ಯಡಿಯೂರಪ್ಪ ತುಮಕೂರು
18) ಭಾರತ ಸಂವಿಧಾನ ಮತ್ತು ರಾಜಕೀಯ – ಎಚ್.ಎಮ್. ರಾಜಶೇಖರ
19) ನಮ್ಮ ನ್ಯಾಯಾಂಗ – ಬಿ.ಆರ್.ಅಗರವಾಲ್
20) ನಮ್ಮ ಸಂಸತ್ತು – ಸುಭಾಶ ಕಶ್ಯಪ್
21) ಭಾರತದ ಆರ್ಥಿಕ ಭೂಗೋಳಶಾಸ್ತ್ರ – ಪಿ.ಮಲ್ಲಪ್ಪ
22) ಭಾರತದ ಪ್ರಾದೇಶಿಕ ಮತ್ತು ಆರ್ಥಿಕ ಭೂಗೋಳಶಾಸ್ತ್ರ – ರಂಗನಾಥ
23) ಭೂಗೋಳ ವಿಶ್ವಕೋಶ – ಮೈಸೂರು ವಿಶ್ವವಿದ್ಯಾಲಯ
24) ಇತಿಹಾಸ ವಿಶ್ವಕೋಶ – ಮೈಸೂರು ವಿಶ್ವವಿದ್ಯಾಲಯ
25) ಕರ್ನಾಟಕ ವಿಶ್ವಕೋಶ ಭಾಗ -1
26) ಕರ್ನಾಟಕ ವಿಶ್ವಕೋಶ ಭಾಗ -2ಮೈಸೂರು ವಿಶ್ವವಿದ್ಯಾಲಯ
27) ಭಾರತದ ಆರ್ಥಿಕ ವ್ಯವಸ್ಥೆ – ಎಚ್.ಆರ್. ಕೃಷ್ಣೇಗೌಡ
28) ಕರ್ನಾಟಕದ ಆರ್ಥಿಕತೆ – ನೀ.ತಿ.ಸೋಮಶೇಖರ
29) ಕರ್ನಾಟಕ ಭೂಗೋಳ – ಪಿ.ಮಲ್ಲಪ್ಪ
30) ವಿಜ್ಞಾನ ಕಲಿಯೋಣ ಭಾಗ -1,2,3,4 – ಸಿ.ಎನ್.ಆರ್.ರಾವ್ ಮತ್ತು ಇಂದುಮತಿ ರಾವ್ – ನ್ಯಾಷನಲ್ ಬುಕ್ ಟ್ರಸ್ಟ್
31) ಜ್ಞಾನ ವಿಜ್ಞಾನ ಕೋಶ – ನವಕರ್ನಾಟಕ ಪ್ರಕಾಶನ
32) ನವಕರ್ನಾಟಕ ವಿಜ್ಞಾನ ಮಾಲಿಕೆಗಳು – 14 ಸರಣಿ
33) ಇದು ನಮ್ಮ ಕರ್ನಾಟಕ – ಚಾಣಕ್ಯ ಪ್ರಕಾಶನ
34) ಕನ್ನಡ ಕನ್ನಡಿಗ ಕರ್ನಾಟಕ – ಎಂ.ಚಿದಾನಂದ ಮೂರ್ತಿ
(dont buy all books, see the syllabus and according to that buy which ever you want)
Also refer:-
NCRET and DCRET text books internet/web portals,
Kannada & English news papers,
Manorama, Indian year books, etc… yojana,
chronicle like magazines, some notes prepared by coaching institutes
2017ನೆ ಸಾಲಿನ ಕೆ.ಎ.ಎಸ್.(KAS) ಟಾಪರ್ ಐಶ್ವರ್ಯ ರವರ ಸಂಗ್ರಹ ಚಿತ್ರ.
ಕೆ.ಎ.ಎಸ್.(KAS) ಪರೀಕ್ಷೆಯ ತಯಾರಿಗಾಗಿ ಅಭ್ಯರ್ಥಿಯಲ್ಲಿ ಈ ಕೆಳಗಿನ ಗುಣಗಳು ಇರಬೇಕು :-
* ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು.
* ಪರೀಕ್ಷೆ ತಯಾರಿ ಮಾಡುವುದು ಬೇರೆ. ಅದರಲ್ಲಿ ಇಳಿಯುವುದು ಬೇರೆ. ಇಲ್ಲಿ ಪರೀಕ್ಷೆಗಾಗಿ ಆಳವಾದ ಅಧ್ಯಯನ ಮಾಡಬೇಕು. ಸಮುದ್ರ ಮೇಲ್ಗಡೆ ತೆರೆಗಳು ಹೆಚ್ಚಾಗಿ ಇರುವುವು. ಆದರೆ ಒಳಗೆ ಹೋದಂತೆ ಅಲ್ಲಿ ಪ್ರಶಾಂತತೆ ಇರುವುದು. ಅದೇ ರೀತಿ ಮೇಲ್ನೋಟಕ್ಕೆ ತಯಾರಿ ನಡೆಸಿದಾಗ ಮೈಂಡ್ ಡಿಸ್ಟರ್ಬ್ ಜಾಸ್ತಿ ಇರುವುದು. ಅದರಲ್ಲಿ ಆಳವಾಗಿ ತೊಡಗಿದಾಗ ನಮ್ಮ ಓದಿಗೆ ಡಿಸ್ಟರ್ಬ್ ಕಡಿಮೆಯಾಗುವುದು.
* ಪರೀಕ್ಷೆಗಾಗಿ ನಿಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಾಗ, ಅದರಿಂದ ಹೊರಗೆ ಬರಬಾರದು. ಅದನ್ನು ದೃಢತೆ ಎನ್ನುವರು. ದೃಢವಾದ ಮನಸ್ಸು ಇಟ್ಟು ತಯಾರಿ ನಡೆಸಬೇಕು. ಕೆಲವರು ಕೆ.ಎ.ಎಸ್. ಪರೀಕ್ಷೆಗಾಗಿ ಪೂರ್ಣ ತಯಾರಿ ನಡೆಸಿದ್ದಾಗ, ಇನ್ನೊಂದು ಪರೀಕ್ಷೆ ಕಾಲ್ ಫಾರ್ಂ ಆದ ಕೂಡಲೇ ಕೆ.ಎ.ಎಸ್. ಅಲ್ಲೇ ಬಿಟ್ಟು ಇನ್ನೊಂದು ಪರೀಕ್ಷೆಗೂ ತಯಾರಿ ನಡೆಸುತ್ತಾರೆ. ಅದನ್ನು ಪೂರ್ಣಗೊಳಿಸದೆ, ಮತ್ತೊಂದು ಪರೀಕ್ಷೆಗೆ ಜಿಗಿಯುತ್ತಾರೆ. ಇಂಥವರು ಯಾವ ಪರೀಕ್ಷೆಯಲ್ಲಿಯೂ ಯಶಸ್ವಿಯಾಗುವುದಿಲ್ಲ.
* ಇಂಥ ಪರೀಕ್ಷೆ ತಯಾರಿ ನಡೆಸಿದಾಗ ನಿಮ್ಮ ಮನಸ್ಸನ್ನು ಆಕರ್ಷಣೆಯಿಂದ ದೂರ ಇಡಬೇಕು. ಆಕರ್ಷಣೆಗೆ ಒಳಗಾಗಿ ಓದುತ್ತಾ ಇದ್ದಾಗ ಅಭ್ಯಾಸ ಪರಿಪೂರ್ಣವಾಗುವುದಿಲ್ಲ. ಮುಗ್ಧ ಮನಸ್ಸು ಏಕಾಗ್ರತೆಗೊಳ್ಳುವುದಿಲ್ಲ. ಯಾವುದೋ ಭಾವಲೋಕದಲ್ಲಿ ಓದುತ್ತಾ ಇರುವುವರು ಅವರು ಎಷ್ಟೇ ಗಂಟೆ ಓದಿದರೂ ಕೂಡಾ, ತಾವು ಯಾವುದು ಓದಿದ್ದು ಎಂಬುದು ಗೊತ್ತಿರುವುದಿಲ್ಲ.
* ಈ ಪರೀಕ್ಷೆಗೆ ಏಷ್ಟು ಗಂಟೆ ತಯಾರಿ ನಡೆಸಬೇಕು ಎಂಬ ಪ್ರಶ್ನೆ ಬಹಳಷ್ಟು ಅಭ್ಯರ್ಥಿಗಳ ಪ್ರಶ್ನೆಯಾಗಿದೆ. ನನ್ನ ಪ್ರಕಾರ ಕನಿಷ್ಠ 12 ರಿಂದ 14ತಾಸು ಓದಬೇಕು. ಕೆಲವರಿಗೆ ಗಾಬರಿಯಾಗಬಹುದು. ಇದಕ್ಕಿಂತ ಕಡಿಮೆ ಅವಧಿಯನ್ನು ತೆಗೆದುಕೊಂಡರೆ, ವಿಷಯವನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲವೆನೋ ಎಂದು ಕೆಲವರು ಹೇಳುವ ಪ್ರಕಾರ ಎಷ್ಟು ಗಂಟೆ ಓದುವುದು ಮುಖ್ಯವಲ್ಲ ಎಷ್ಟು ವಿಷಯ ತಿಳಿದುಕೊಂಡೆವು ಎಂಬುವುದು ಮುಖ್ಯವಾಗುತ್ತದೆ. ಆದರೆ, ಅಧ್ಯಯನಕ್ಕೆ ಕೂಡುವ ಅವಧಿ ಹೆಚ್ಚಿದಂತೆ, ಸಹಜವಾಗಿ ಏಕಾಗ್ರತೆ ಹಾಗೂ ಅರ್ಥ ಮಾಡಿಕೊಳ್ಳುವುದು.
* ಸಾಮಾನ್ಯವಾಗಿ ಯಾವ ಸಮಯದಲ್ಲಿ ಓದಬೇಕು ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ಇಲ್ಲಿ ಯಾವ ಸಮಯದಲ್ಲಿ ಓದುತ್ತೇನೆ ಎಂಬುದು ಮುಖ್ಯವಲ್ಲ. ಯಾವುದೇ ಸಮಯದಲ್ಲಿ ಓದಿ ಆದರೆ, ಮನಸ್ಸು ಕೊಟ್ಟು ಅಧ್ಯಯನ ಮಾಡಿ. ಸಾಮಾನ್ಯವಾಗಿ ಇಂಥ ಪರೀಕ್ಷೆಗೆ ತಯಾರಿ ನಡೆಸುವವರು ರಾತ್ರಿಯೇ ಹೆಚ್ಚು ಅಧ್ಯಯನ ಮಾಡುತ್ತಾರೆ.
* ಈ ಪರೀಕ್ಷೆಗೆ ವಿಶೇಷ ತಯಾರಿ ಹಾಗೂ ಪರಿಶ್ರಮ ಬೇಕಾಗುವುದು. ಅದಕ್ಕಾಗಿ ಸಹನೆ ಇರಬೇಕು. ನಿರಂತರ ಓದುತ್ತಾ ಇದ್ದಾಗ, ಅದನ್ನು ಬಿಟ್ಟು ಓಡಿಹೋಗೋಣ ಎಂಬ ಮನಸ್ಸು ಬರುತ್ತದೆ. ಕೆಲವರು 11ಹೆಜ್ಜೆವರೆಗೆ ಬಂದಿರುತ್ತಾರೆ. ಇನ್ನೊಂದು ಹೆಜ್ಜೆ ಇಟ್ಟರೆ, ಗುರಿ ಮುಟ್ಟಲು ಸಾಧ್ಯವಿರುತ್ತದೆ. ಅದನ್ನು ಗುರ್ತಿಸದೆ, ಸಹನೆ ಕಳೆದುಕೊಂಡು ಸ್ಪರ್ಧೆಯಿಂದ ಹಿಂದಕ್ಕೆ ಸರಿಯುತ್ತಾರೆ. ಓಡಿ ಹೋಗುತ್ತಾರೆ.
* ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಗೆ ತಯಾರಿ ಮಾಡುವಾಗ ನಮ್ಮ ಓದು ಎಷ್ಟು ಮುಖ್ಯವಾಗಿರುತ್ತದೆ. ಅಷ್ಟೇ ಮುಖ್ಯ ನಮಗೆ ಪ್ರೇರಣೆ ಹಾಗೂ ಸ್ಫೂರ್ತಿ. ಅದಕ್ಕಾಗಿ ಈಗಾಗಲೇ ಯಶಸ್ವಿಯಾದವರ ಸಂದರ್ಶನ ಓದಿ ಹಾಗೂ ಕೆ.ಎ.ಎಸ್. ಪರೀಕ್ಷೆಗೆ ಸಂಬಂಧಪಟ್ಟ ಸೆಮಿನಾರ್ಗಳಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮ ಮನಸ್ಸು ಗಟ್ಟಿಯಾಗುತ್ತದೆ. ನಮ್ಮ ಸ್ಪರ್ಧಾ ಚಾಣಕ್ಯ ಪತ್ರಿಕೆಯಲ್ಲಿ ಪ್ರತಿ ತಿಂಗಳು ಸಾಧಕರ ಬಗ್ಗೆ ಪ್ರಕಟಿಸಿದ್ದೇವೆ. ಒಮ್ಮೆ ಓದಿ ನೋಡಿ. ಸಾಧಿಸಲು ಅವರು ತೆಗೆದುಕೊಂಡ ಸಮಯ, ಯಶಸ್ಸಿಗಾಗಿ ಪಟ್ಟ ಪರಿಶ್ರಮ ಎಲ್ಲವೂ ಗೊತ್ತಾಗುತ್ತದೆ.
* ಓದುವಾಗ ಯಾವುದೇ ವಿಷಯ ತಿಳಿಯದಿದ್ದಾಗ ಗಾಬರಿಯಾಬೇಡಿ. ಎಲ್ಲರಿಗೂ ಎಲ್ಲಾ ವಿಷಯ ಗೊತ್ತಿರುವುದಿಲ್ಲ. ಯಾಕೆಂದರೆ ಯಾರೂ ಇಲ್ಲಿಯವರೆಗೆ 100ಕ್ಕೆ 100ಅಂಕಗಳನ್ನು ತೆಗೆದುಕೊಂಡ ಉದಾಹರಣೆ ಇಲ್ಲ. ಕೆಲವರು ಒಂದೂ ಪ್ರಶ್ನೆ ಬರದಿದ್ದಾಗ ನಾನು ದಡ್ಡನೆಂಬ ಭಾವನೆ ಬೆಳೆಸಿಕೊಂಡು ಉತ್ಸಾಹ ಕಳೆದುಕೊಳ್ಳುತ್ತಾರೆ.
* ಕೆಲವರಿಗೆ ಈ ಪರೀಕ್ಷೆ ಎಂದರೆ ಪುಸ್ತಕಗಳನ್ನು ಸಂಗ್ರಹಿಸುವುದು ಎಂದು ತಿಳಿದುಕೊಂಡು ಎಲ್ಲಾ ಪುಸ್ತಕಗಳನ್ನು ಖರೀದಿಸುತ್ತಾರೆ. ಆದರೆ, ಯವುದನ್ನು ಪೂರ್ಣವಾಗಿ ಓದುವುದಿಲ್ಲ. ಉತ್ತಮ ಪುಸ್ತಕಗಳು ಇದ್ದರೆ ಸಾಕು. ಮುಂದಿನ ಸಂಚಿಕೆಯಲ್ಲಿ ಕೆ.ಎ.ಎಸ್. ಪರೀಕ್ಷೆ ತಯಾರಿಗೆ ಇರುವ ಉತ್ತಮ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸುತ್ತೇವೆ.
* ಉನ್ನತ ಪರೀಕ್ಷೆ ಬರೆಯಬೇಕಾದರೆ ಅಧ್ಯಯನದ ಕೊಠಡಿಯು ಕೂಡ ಅಷ್ಟೇ ಉತ್ತಮವಾಗಿರಬೇಕು. ಅಲ್ಲಿಯ ವಾತಾವರಣ ಬಹಳ ಚೆನ್ನಾಗಿರಬೇಕು. ಒಂದು ವೇಳೆ ನೀವು ಇರುವ ರೂಮಿನಲ್ಲಿ ಎಲ್ಲರೂ ಕೆ.ಎ.ಎಸ್. ಆಕಾಂಕ್ಷಿಗಳು ಇದ್ದರೆ ಚೆಂದ. ಬೇರೆ ಪರೀಕ್ಷೆಗೆ ತಯರಾಗುವವರ ಜೊತೆ ಇರಬಾರದು. ಯಾಕೆಂದರೆ, ನಿಮ್ಮದೇ ಕೆ.ಎ.ಎಸ್. ವಾತಾವರಣ ಇರುವುದಿಲ್ಲ. ಹಾಗೂ ಸ್ಫೂರ್ತಿ ಉಂಟಾಗುವುದಿಲ್ಲ.
* ಬೇರೆಯವರು ಓದುವುದನ್ನು ನೋಡಿ, ಅವರ ಪುಸ್ತಕಗಳ ಸಂಗ್ರಹ ನೋಡಿ, ಅವರ ಚರ್ಚೆಯನ್ನು ನೋಡಿ ನೀವು ಗಾಬರಿಯಾಗಬೇಡಿ. ಯಾವತ್ತೂ ಮತ್ತೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಓದುವಾಗ ನಿಮ್ಮದೇ ಶೈಲಿ ರೂಢಿಸಿಕೊಂಡು ಓದಬೇಕು.
* ಓದುವಾಗ ಮುಖ್ಯವಾದ ವಿಷಯಗಳನ್ನು ಕುರಿತು ನಿಮ್ಮದೇ ಆದ ನೋಟ್ಸ್ ಮಾಡಿಕೊಳ್ಳುವುದು ಉತ್ತಮ. ಸಮಯ ಇರದಿದ್ದಾಗ ಮಾತ್ರ ಪುಸ್ತಕದಲ್ಲಿ ಅಂಡರಲೈನ್ ಮಾಡಿಕೊಳ್ಳಿ. ಇದರಿಂದ ವೇಗವಾಗಿ ಪುನರ್ ಅಧ್ಯಯನ ಮಾಡಲು ಹಾಗೂ ನೆನಪಿಟ್ಟುಕೊಳ್ಳಲು ಸುಲಭವಾಗುತ್ತದೆ.
* ಇದಕ್ಕಾಗಿ ಗೆಳೆಯರ ಗುಂಪು ಮಾಡಿಕೊಳ್ಳಿ. ಯಾವುದೇ ಕಾರಣಕ್ಕೂ ಏಕಾಂಗಿ ಓದಬೇಡಿ. ಗುಂಪು ಚರ್ಚೆ ಮಾಡುವಾಗ ಹೊಸ ಹೊಸ ವಿಷಯ ತಿಳಿಯುವುದು ಅಲ್ಲದೆ ಚರ್ಚೆ ಮಾಡಿದ ವಿಷಯವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ.
* ಚರ್ಚೆ ಹರಟೆಯಾಗಬಾರದು. ಓದು ಆಯಾಸವಾಗಬಾರದು ಹಾಗೂ ನಿರಂತರ ಉತ್ಸಾಹ ನಿಮ್ಮಲ್ಲಿ ಇರಬೇಕಾದರೆ, ಪ್ರತಿನಿತ್ಯ ಕನಿಷ್ಠ ಅರ್ಧಗಂಟೆಯಾದರೂ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನ ಮಾಡಬೇಕು. ಇದರಿಂದ ನಮ್ಮ ದೇಹಕ್ಕೆ ಶುದ್ಧವಾದ ಆಮ್ಲಜನಕ ಪೂರೈಕೆಯಾಗುವುದಲ್ಲದೆ, ರಕ್ತ ಪರಿಚಲನೆ ನಿಯಮಿತಗೊಳ್ಳುವುದು. ಇದರಿಂದ ಉತ್ಸಾಹ ಹೆಚ್ಚಾಗುತ್ತದೆ. ಪ್ರಾಮಾಣಿಕವಾಗಿ ನಿಮ್ಮನ್ನು ಪರೀಕ್ಷೆಯಲ್ಲಿ ತೊಡಗಿಸಿಕೊಂಡರೆ, ನಿಮ್ಮ ತಯಾರಿ ಉತ್ತಮವಾಗಿರುತ್ತದೆ. ಯಾವುದೇ ಕಾರಣಕ್ಕೂ ಉತ್ಸಾಹ ಕಳೆದುಕೊಳ್ಳದೆ, ಒಂದೇ ಮನಸ್ಸಿನಿಂದ ತಯಾರಿಯಲ್ಲಿ ತೊಡಗಿಸಿಕೊಳ್ಳಿ. ನಿಲ್ಲಬೇಡಿ, ಮುನ್ನುಗ್ಗಿರಿ, ಯಶಸ್ಸು ಸಿಗಲಿ.
* ನಿಮ್ಮದೇ ಆದ ಟೈಮ್ ಟೇಬಲ್ ಹಾಕಿಕೊಳ್ಳಬೇಕು. ಪ್ರಾರಂಭದಲ್ಲಿ ಟೈಮ್ ಟೇಬಲ್ ಪಾಲನೆ ಮಾಡದೇ ಹೋಗಬಹುದು. ಆದರೆ, ನೀವು ನಿರಂತರವಾಗಿ ಪಾಲನೆ ಮಾಡಿದಂತೆ ರೂಢಿಯಾಗುತ್ತದೆ. ಟೈಮ್ ಟೇಬಲ್ ಇಲ್ಲದಿದ್ದರೆ, ಒಂದು ವಿಷಯ ಹೆಚ್ಚು ಓದುತ್ತೀರಿ, ಇನ್ನೊಂದು ವಿಷಯವನ್ನು ಕಡಿಮೆ ಓದುತ್ತೀರಿ. ನಾನು ಮಾಡೇ ಮಾಡ್ತೀನಿ ಎಂಬ ವಿಶ್ವಾಸ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿಮ್ಮ ಮೇಲಿನ ನಂಬಿಕೆಯನ್ನು ಹಾಗೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ