ಸುದ್ದಿ

ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

56

ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ.

ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ ಬಿಟ್ಟು ಬಿಟ್ಟು ಸುರಿಯುತ್ತಲೇ ಇದ್ದಾನೆ. ಕಳೆದ ಬಾರಿ ಭೂ ಕುಸಿತವುಂಟಾಗಿದ್ದ ಪ್ರದೇಶಗಳ ಜನರು ಸ್ವಲ್ಪವೇ ಜೋರಾಗಿ ಮಳೆ ಬಿದ್ದರೂ ಆತಂಕಪಡುವಂತಾಗಿದ್ದು, ಜೀವ ಕೈಯಲ್ಲಿಯೇ ಹಿಡಿದು ಬದುಕುತ್ತಿದ್ದಾರೆ.ಇದೇ 20ರಿಂದ ಪ್ರತಿ ವರ್ಷದಂತೆ ಮಾನ್ಸೂನ್ ಮಳೆ ಬೀಳಲಿದ್ದು, ಅಪಾಯದ ಸ್ಥಿತಿಯಲ್ಲಿರುವ ಪ್ರದೇಶಗಳಲ್ಲಿ ಮನೆಗಳ ಖಾಲಿ ಮಾಡುವಂತೆ ಮಡಿಕೇರಿ ನಗರದಲ್ಲೇ ಇರುವ ಚಾಮುಂಡೇಶ್ವರಿ ನಗರ,

ಇಂದಿರಾನಗರ ಮತ್ತು ಮಂಗಳಾದೇವಿ ನಗರಗಳ ಜನರಿಗೆ ನಗರಸಭೆ ನೋಟಿಸ್ ಜಾರಿ ಮಾಡಿದೆ. ಇದು ಈ ಪ್ರದೇಶಗಳ ಜನರನ್ನು ಆತಂಕಕ್ಕೆ ದೂಡಿದ್ದು, ಜೀವ ಬಿಗಿ ಹಿಡಿದು ಬದುಕುತ್ತಿದ್ದಾರೆ.ಕಳೆದ ಬಾರಿ ಭೂಕುಸಿತದಿಂದ ಕೆಲವು ಮನೆಗಳು ಬಿರುಕು ಬಿಟ್ಟಿದ್ದರೆ, ಕೆಲವು ಮನೆಗಳು ವಾಸಿಸಲು ಯೋಗ್ಯವಲ್ಲದ ಸ್ಥಿತಿಯಲ್ಲಿವೆ. 20ರಿಂದ ಮಾನ್ಸೂನ್ ಮಳೆ ಮತ್ತೆ ಜೋರಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅಪಾಯ ಎದುರಾಗದಂತೆ ಮುನ್ನೇಚ್ಚರಿಕೆ ಕ್ರಮವಾಗಿ ನೋಟಿಸ್ ನೀಡಿದ್ದೇವೆ ಅಷ್ಟೇ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ.

ಆದರೆ ನಮಗೆ ಯಾವುದೇ ಪೂರ್ವ ವ್ಯವಸ್ಥೆ ಮಾಡಿಕೊಡದೆ ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ನಾವು ಮನೆಗಳನ್ನು ಖಾಲಿ ಮಾಡಿ ಎಲ್ಲಿಗೆ ಹೋಗೋದು, ಮನೆಗಳು ಬಾಡಿಗೆಗೆ ಸಿಗುತ್ತಿಲ್ಲ, ಸಿಕ್ಕರೂ ಅತ್ಯಂತ ದುಬಾರಿ ಬಾಡಿಗೆ ಇದೆ. ನಾವು ಇಲ್ಲಿಯೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಸಾಧ್ಯವಾದರೆ ಮತ್ತೆ ಪರಿಹಾರ ಕೇಂದ್ರಗಳನ್ನು ತೆರೆದು ರಕ್ಷಣೆ ನೀಡಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…