ಕ್ರೀಡೆ

ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

1072

ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು. ಹಾಗೂ ಸಿಂಧು ಅವರನ್ನು ಗ್ರೂಪ್-1 ಹುದ್ದೆಗೆ ನೇಮಕ ಮಾಡಲು ರಾಜ್ಯ ಸಾರ್ವಜನಿಕ ಸೇವಾ ಕಾಯ್ದೆಯನ್ನು ಜಾರಿ ಮಾಡಲಾಗಿತ್ತು.

ಇದಕ್ಕೆ ಪ್ರತಿಕ್ರಯಿಸಿದ್ದ ಸಿಂಧುರವರು, ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದರು ಹಾಗೂ ಬ್ಯಾಡ್ಮಿಂಟನ್ ಗೆ ತಮ್ಮ ಮೊದಲ ಆದ್ಯತೆ ಅಂತಾ ಹೇಳಿದ್ದರು. ಆಗ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರವರು ಸಿಂಧುಗೆ ಶುಭ ಹಾರೈಸಿ, ದೇಶಕ್ಕೆ ಮತ್ತಷ್ಟು ಪದಕಗಳನ್ನು ಗೆದ್ದು ತರಲಿ ಅಂತಾ ಹೇಳಿದ್ರು.

ಹೀಗಾಗಿ ಭಾರತದ ಖ್ಯಾತ ಶಟಲ್‌ ಬ್ಯಾಡ್ಮಿಂಟನ್‌ ಆಟಗಾರ್ತಿ, ಒಲಿಂಪಿಕ್‌ ಪದಕ ವಿಜೇತೆ, ಪಿ ವಿ ಸಿಂಧು ಆಂಧ್ರ ಪ್ರದೇಶ ಸರಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿಂಧು ಅವರಿಗೆ ಕಳೆದ ಜು.27ರಂದೇ ಜಿಲ್ಲಾಧಿಕಾರಿಯಾಗಿ ಅಧಿಕೃತ ನೇಮಕಾತಿ ಪತ್ರವನ್ನು ನೀಡಲಾಗಿತ್ತು. ಆದರೆ ಅವರು ನಿನ್ನೆ ಬುಧವಾರ ಔಪಚಾರಿಕವಾಗಿ ತಮ್ಮ ಅಧಿಕಾರ ವಹಿಸಿಕೊಂಡರು.

ಪಿ ವಿ ಸಿಂಧುರವರ ಬಾಲ್ಯದ ಬಗ್ಗೆ ತಿಳಿಯೋಣ:-

ಪಿ.ವಿ ಸಿಂಧುರವರು, 5 ಜುಲೈ 1995ರಂದು ಹೈದರಾಬಾದ್ನoಲ್ಲಿ ಜನಿಸಿದರು. ತಂದೆ ಪಿ.ವಿ. ರಮಣ ಮತ್ತು ತಾಯಿ ಪಿ. ವಿಜಯ. ಸಿಂಧುವಿನ ತಂದೆ-ತಾಯಿ ಇಬ್ಬರೂ ಸಹ ಮಾಜಿ ವಾಲಿಬಾಲ್ ಆಟಗಾರರಾಗಿರುವುದೊಂದು ವಿಶೇಷ. ಭಾರತ ಸರ್ಕಾರವು ಕೊಡಮಾಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಪಿ.ರಮಣರು 2000 ನೆಯ ಇಸವಿಯಲ್ಲಿ ಭಾಜನರಾಗಿದ್ದಾರೆ. ತಂದೆ ವೃತ್ತಿಪರ ವಾಲಿಬಾಲ್ ಆಟಗಾರರಾಗಿದ್ದರೂ ಸಹ ಸಿಂಧು ಮಾತ್ರ ಬ್ಯಾಡ್ಮಿಂಟನ್ ನಡೆಗೆ ಆಕರ್ಷಿತರಾದರು.ಅದಕ್ಕೆ ಕಾರಣ, 2001 ರ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಪುಲ್ಲೇಲ ಗೋಪಿಚಂದ್‍‍ರ ಯಶಸ್ಸು ಮತ್ತು ಅವರಿಂದ ಪಡೆದ ಸ್ಫೂರ್ತಿ. ತನ್ನ ಎಂಟನೆಯ ವಯಸ್ಸಿನಲ್ಲೇ ಸಿಂಧು ಬ್ಯಾಡ್ಮಿಂಟನ್ ಆಡಲು ಪ್ರಾರಂಭಿಸಿದ್ದರು, ಇದೂ ಸಹ ಅವರನ್ನು ಬ್ಯಾಡ್ಮಿಂಟನ್ ಕಡೆಗೆ ಸೆಳೆಯಲು ಕಾರಣವಾಯಿತು.

ಪಿ.ವಿ ಸಿಂಧುರವರ ಬ್ಯಾಡ್ಮಿಂಟನ್ ಸಾಧನೆ:-

ಪಿ.ವಿ ಸಿಂಧುರವರು ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. 10 ಆಗಸ್ಟ್ 2012 ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1983 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ಸೆಪ್ಟೆಂಬರ್ 21,2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 20ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ:-

ಭೂ ಆಡಳಿತೆಯ ಮುಖ್ಯ ಆಯುಕ್ತರಾಗಿರುವ ಅನಿಲ್‌ ಚಂದ್ರ ಪುನೇತ ಅವರಿಗೆ ಪಿ ವಿ ಸಿಂಧು ತಮ್ಮ ನೇಮಕಾತಿ ಪತ್ರವನ್ನು ಸಲ್ಲಿಸಿ ಗ್ರೂಪ್‌ 1 ಸರಕಾರಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸರಕಾರಿ ಆಡಳಿತೆಯಲ್ಲಿನ ತಮ್ಮ ಜೀವನದ ಹೊಸ ಪಾತ್ರವನ್ನು ಆರಂಭಿಸಿದರು.

ಸಿಂಧು ಅವರ ತನ್ನ ಹೆತ್ತವರೊಡಗೂಡಿ ಸರಕಾರದ ಭೂ ಆಡಳಿತೆಯ ಮುಖ್ಯ ಆಯುಕ್ತರ ಕಚೇರಿಗೆ ತೆರಳಿ ಗೊಲ್ಲಪುಡಿಯಲ್ಲಿನ ಸರಕಾರಿ ಸಚಿವಾಲಯದಲ್ಲಿ ಅಧಿಕಾರ ಗ್ರಹಣ ಮಾಡಿದರು.

 

ಸಿಂಧು ಎರಡು ಬಾರಿಯ ಕಂಚಿನ ಪದಕ ವಿಜೇತೆಯಾಗಿದ್ದಾರೆ.

ಸ್ನೇಹಿತರೆ ನಮ್ಮ ಪ್ರಕಾರ ಯಾವುದೇ ಕ್ರೀಡೆಯಲ್ಲಿ ಯಾರೇ ಆಗಲಿ, ನಮ್ಮ ದೇಶಕ್ಕೆ ಪದಕ ತಂದು ಕೊಡುವಲ್ಲಿ ಸಫಲ ರಾಗಿದ್ದಲ್ಲಿ, ಅಂತಹ ಕ್ರೀಡಾ ಪಟುಗಳಿಗೆ ಅದೇ ಕ್ರೀಡೆಯಲ್ಲಿ ಮುಂದುವರಿಯಲು, ಅವರಿಗೆ ಆರ್ಥಿಕವಾಗಲಿ, ಅಥವಾ ಬೇರೆ ಯಾವುದೇ ರೀತಿಯಿಂದಾಗಲಿ, ಸರಕಾರಗಳು ಪ್ರೋತ್ಸಾಹ ಕೊಡಬೇಕು ಮತ್ತು ಅವರನ್ನು ಬೆಳೆಸಬೇಕು.

ಅದು ಬಿಟ್ಟು ಸರಕಾರಗಳು ತಮ್ಮ ತೋರಿಕೆಗಾಗಿ ಅಧಿಕಾರದ ಗದ್ದುಗೆಯನ್ನು ಕೊಟ್ಟರೆ, ಈ ಅಧಿಕಾರದ ಮಾಯೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಡುತ್ತದಯೇ? ಹಾಗೂ ಇನ್ನಷ್ಟು ಮತ್ತಷ್ಟು ಪದಕಗಳು ನಮ್ಮ ದೇಶಕ್ಕೆ ಬರಲು ಸಾಧ್ಯವೇ? ನಾವು ನಮ್ಮ ದೇಶದ ಹೆಸರನ್ನು ಸಾಗರದಾಚೆ ಕೊಂಡಯ್ಯುವಂತ, ಉತ್ತಮ ಕ್ರೀಡಾಪಟುವನ್ನು ಕಳೆದುಕೊಂಡಂತೆ ಆಗುವುದಿಲ್ಲವೇ? ಇದಕ್ಕೆ ನಿಮ್ಮ ಅಭಿಪ್ರಾಯವನ್ನು ನಿಮ್ಮ ಕಾಮೆಂಟ್ ಮೂಲಕ ತಿಳಿಸಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…