ಜ್ಯೋತಿಷ್ಯ

ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

417

ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು

ವೃಷಭ:-

ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಸಂದರ್ಶಿಸಬೇಕಾದೀತು. ರಾಜಕೀಯ ಸ್ಥಿತ್ಯಂತರ ಸಾಧ್ಯತೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗಬಹುದು ಮತ್ತು ಹೆಚ್ಚು ಬದ್ಧತೆ ಪ್ರದರ್ಶಿಸಬೇಕಾಗಬಹುದು. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ..

ಮಿಥುನ:

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

 

ಕಟಕ :-

ಆದಾಯ ಹೆಚ್ಚುತ್ತದೆ. ನಿಮ್ಮ ವೃತ್ತಿ ಜೀವನದಲ್ಲಿ ಏಳ್ಗೆ ಕಾಣುತ್ತದೆ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ ಮತ್ತು ಉತ್ತಮ ಫಲಿತಾಂಶಗಳನ್ನು ಒದಗಿಸುತ್ತದೆ. ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುತ್ತದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು.

 ಸಿಂಹ:

ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ನಿಲುವುಗಳನ್ನು ಬದಲಾಯಿಸದೇ ಸಮರ್ಥಿಸಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳಿಂದ ಆತಂಕ ಪಡುವಂತಾದೀತು. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನವನ್ನು ಎದುರಿಸಬೇಕಾಗುತ್ತದೆ. ದಿನಾಂತ್ಯ ಶುಭ ವಾರ್ತೆ.

ಕನ್ಯಾ :-

ನೀವು ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಧಾನವಾಗಿ ನೀವು ಆತ್ಮವಿಶ್ವಾಸವನ್ನು ಗಳಿಸುತ್ತೀರಿ ಮತ್ತು ಏನನ್ನಾದರೂ ಸಾಧಿಸಲು ಬಯಸುತ್ತೀರಿ. ಹೊಸ ಕಾರ್ಯ, ಹೊಸ ಪರಿಸರಕ್ಕೆ ಅನುಕೂಲವಾದೀತು. ನಿಮ್ಮ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ದೈವಾನುಗ್ರಹ ಉತ್ತಮವಿದ್ದು ಇಷ್ಠಾರ್ಥ ಸಿದ್ಧಿಯಾಗಲಿದೆ‌. ನಿಮ್ಮ ಕೆಲಸಗಳ ಬಗೆಗೆ ಹೆಚ್ಚಿನ ಆದ್ಯತೆಯೊಂದಿಗೆ ನಿಗಾವಹಿಸುವುದು ಒಳಿತು. ಕುಟುಂಬದವರೊಂದಿಗೆ ಆರಾಮದಾಯಕ ದಿನವನ್ನಾಗಿ ಕಳೆಯುವಿರಿ. ಆಯಾಸದಿಂದ ಮುಕ್ತಿ.

ತುಲಾ:

ಸಮಸ್ಯೆಗಳು ಹಂತ ಹಂತವಾಗಿ ಉಪಶಮನ ವಾಗಲಿವೆ. ಶುಭಾಶುಭ ಮಿಶ್ರ ಫ‌ಲವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಶೀಲತೆಗೆ ಅಭಿವೃದ್ಧಿ. ಅತಿಥಿಗಳ ಆಗಮನವಿರುತ್ತದೆ. ಕೆಲಸದಲ್ಲಿ ಕೆಲವು ನಿರಾಸೆಗಳೂ ಇರಬಹುದು. ಅಕ್ಟೋಬರ್ ನಂತರ, ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನ ಬೆಳಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸದಿಂದ ಕಾಲಕಳೆಯುವಿರಿ. ಕೂಡಿಟ್ಟ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಬೇಕಾದೀತು. ಚಿಂತಿಸಬೇಕಾದ ಅಗತ್ಯವಿಲ್ಲ.

ವೃಶ್ಚಿಕ :-

ಆಯಾಸ ಕಡಿಮೆಯಾಗುವ ಜೊತೆಗೆ ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ಮಕ್ಕಳ ಒತ್ತಾಸೆಯ ಮೇರೆಗೆ ವಾಹನ ಖರೀದಿ ಮಾಡಲಿದ್ದೀರಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಲಾಭ. ಅಸಹನೆ ದುರಾಸೆಗೆ ಬಲಿಯಾಗದಿರಿ. ವೃತ್ತಿರಂಗದಲ್ಲಿ ಸ್ಥಾನಮಾನಗಳಿಗೆ ಹಾನಿಯಾಗಬಹುದು ಜಾಗ್ರತೆ ವಹಿಸಿರಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ದಿನಾಂತ್ಯ ಶುಭವಾರ್ತೆ.

ಧನಸ್ಸು:

ಉದರಬಾಧೆ ಶೀತಬಾಧೆಗಳು ತೋರಿಬಂದೀತು. ಆದರೂ ವೃತ್ತಿರಂಗದಲ್ಲಿ ಅಡಚಣೆಗಳಿಂದ ಕಿರಿಕಿರಿ ತಂದರೂ ಮುನ್ನಡೆ ಇದ್ದೇ ಇರುತ್ತದೆ. ಶುಭಮಂಗಲ ಕಾರ್ಯಗಳಿಗೆ ಅನುಕೂಲ ಸಮಯ. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಆದಾಯ ಹೆಚ್ಚಿಸಿಕೊಳ್ಳುವ ಮೂಲವೊಂದನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರ ಮಧ್ಯಸ್ಥಿಕೆಯಿಂದಾಗಿ ಮನೆಯ ವಿಚಾರಗಳನ್ನು ಬಗೆಹರಿಸಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ :-

ಸಗಟು ವ್ಯಾಪಾರಿಗಳಿಗೆ ಲಾಭದ ದಿನ. ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಬಂಧುಗಳ ಜತೆ ತೀರ್ಥಯಾತ್ರೆ ಪ್ರಸ್ತಾಪ ಮಾಡಲಿದ್ದೀರಿ ಇತರರೊಂದಿಗೆ ಸಹಕಾರ ಸಿಗಲಿದೆ. ಆದರೂ ಪ್ರಯತ್ನ ಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಆರ್ಥಿಕವಾಗಿ ಉನ್ನತಿ ಸಿಗಲಿದೆ.

ಕುಂಭ:-

ರೋಗ ಶಮನವಾಗಿ ಸಮಾಧಾನ ತಂದೀತು. ಯೋಗ್ಯ ವಯಸ್ಕರು ವೈವಾಹಿಕ ಭಾಗ್ಯವನ್ನು ಪಡೆಯಲಿದ್ದಾರೆ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಮ್ಮ ಕೆಲಸವನ್ನು ವಿಸ್ತರಿಸುವುದಕ್ಕೆ ನೀವು ಮನೆಯಿಂದ ಹೊರಗೆ ಹೋಗಬಹುದು ಮತ್ತು ನೀವು ಅಲ್ಲಿ ಉತ್ತಮವಾಗಿ ಗಳಿಸಬಹುದು. ಹಣಕಾಸು ಸಂಸ್ಥೆಗಳ ನೆರವಿನಿಂದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಹೆತ್ತವರ ಹಾರೈಕೆ, ಆಶೀರ್ವಾದ ಪಡೆಯಲಿದ್ದೀರಿ. ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ.

ಮೀನ:-

ಖರ್ಚು ವೆಚ್ಚಗಳ ಮೇಲೆ ಬಿಗಿ ಹಿಡಿತ ಅನಿವಾರ್ಯ. ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ. ಅನ್ಯ ವ್ಯಕ್ತಿಗಳಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣದಿಂದ ಚೇತರಿಕೆ ತೋರಿಬಂದೀತು. ಅಗ್ನಿಭಯ, ಪ್ರಯಾಣದಿಂದ ನಷ್ಟ ಕಷ್ಟಗಳು ಇರುತ್ತವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮವು ನಿಮ್ಮ ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

  • ಸಂಬಂಧ

    ವರದಕ್ಷಿಣೆ ಬೇಡಿಕೆ ನೀಡಿದ ವರನ ಕುಟುಂಬದವರಿಗೆ ,ಮದುವೆಯಲ್ಲಿ ‘ವಧು’ ನೀಡಿದ ಶಾಕ್ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…