ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…