ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

ಚಾರ್ಲಿ ಚಾಪ್ಲಿನ್ ಎಂದೇ ಲೋಕವಿಖ್ಯಾತರಾಗಿದ್ದ ಇವರು ಮೂಕಿ ಚಿತ್ರಗಳ ಕಾಲದಲ್ಲೇ ದೊಡ್ಡ ಹೆಸರು ಮಾಡಿದ್ದರು. ದಿ ಟ್ರಾಂಪ್ ಮೂಲಕ ಜಗತ್ಪ್ರಸಿದ್ದರಾಗಿದ್ದ ಚಾಪ್ಲಿನ್, ಸಿನಿಮಾ ರಂಗದ ಬಹು ಮುಖ್ಯ ತಾರೆಯಲ್ಲಿ ಅಗ್ರಮಾನ್ಯರಾಗಿದ್ದಾರೆ.

ಇಂಗ್ಲೆಂಡ್ನಲ್ಲಿ ಮಹಾರಾಣಿ ವಿಕ್ಡೋರಿಯಾ ಕಾಲ ದಿಂದ 1977ರಲ್ಲಿ ನಿಧನರಾಗುವ ತನಕ 75 ವರ್ಷಗಳ ಸುದೀರ್ಘ ಬದುಕಿನಲ್ಲಿ ಚಾಪ್ಲಿನ್ ತಮ್ಮ ಬಹುಪಾಲು ಸಮಯವನ್ನು ಸಿನಿಮಾದಲ್ಲೇ ಕಳೆದ ಪ್ರತಿಭಾವಂತ ನಟ.

ಚಾಪ್ಲಿನ್ನಲ್ಲಿದ್ದ ಅಗಾಧ ಪ್ರತಿಭೆ ಗುರುತಿಸಿದ ಅಮೆರಿಕ ನ್ಯೂಯಾರ್ಕ್ ಮೋಷನ್ ಪಿಕ್ಚರ್ ಕಂಪನಿ ಸೇರುವಂತೆ ಆಹ್ವಾನ ನೀಡಿತು. ಕೀಸ್ಟೋನ್ ಸ್ಟುಡಿಯೋದಲ್ಲಿ ಆ ಕಾಲದಲ್ಲೇ ಸೂಪರ್ ಸ್ಟಾರ್ ನಟನಾಗಿದ್ದ ಫ್ರೆಡ್ ಮೇಸ್ ಸ್ಥಾನವನ್ನು ತುಂಬಲು ಚಾಪ್ಲಿನ್ಗೆ ಆಹ್ವಾನ ನೀಡಲಾಗಿತ್ತು.

ಡಿಸೆಂಬರ್ 16, 1913ರಂದು ವಾರಕ್ಕೆ 150 ಡಾಲರ್ಗಳ ಸಂಭಾವನೆಗಾಗಿ ಸಿನಿಮಾಗಳಲ್ಲಿ ನಟಿಸಲು ಚಾಪ್ಲಿನ್ ನಿರ್ಧರಿಸಿದರು. ಆಗಿನ 150 ಡಾಲರ್ಗಳು ಈಗ 3,597 ಡಾಲರ್ಗಳಿಗೆ ಸಮ(ಸುಮಾರು 2.34 ಲಕ್ಷ ರೂ.ಗಳು). ಯುವಕ ಚಾಪ್ಲಿನ್ನ ಪ್ರತಿಭೆ ನೋಡಿ ಮಾಲೀಕ ಮ್ಯಾಕ್ ಸೆನ್ನೆಟ್ ಬೆರಗಾದರು.

ಮೇಕಿಂಗ್ ಎ ಲೀವಿಂಗ್, ಚಾಪ್ಲಿನ್ ಅಭಿನಯದ ಮೊಟ್ಟಮೊದಲ ಸಿನಿಮಾ. 2ನೇ ಫೆಬ್ರವರಿ 1914ರಲ್ಲಿ ತೆರೆಕಂಡ ಈ ಸಿನಿಮಾ ಚಾಪ್ಲಿನ್ ಬದುಕಿಗೆ ಹೊಸ ತಿರುವು ನೀಡಿದ್ದು ಇತಿಹಾಸ. ಅಲ್ಲಿಂದ ಹಿಂದಿರುಗಿ ನೋಡದ ಈ ವಾಮನಮೂರ್ತಿ ಪ್ರಪಂಚವೇ ನಿಬ್ಬೆರಗಾಗುವಂತೆ ಎತ್ತರಕ್ಕೆ ಬೆಳೆದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…