ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಆಂಧ್ರಪ್ರದೇಶ ಮೂಲದ ಈ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016ರ ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.
ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.
ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.
ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಈ ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.
ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಈ ಬಗ್ಗೆ ವಿಸ್ತøತ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.
ಈ ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…