ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಆಂಧ್ರಪ್ರದೇಶ ಮೂಲದ ಈ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016ರ ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.
ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.
ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.
ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಈ ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.
ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಈ ಬಗ್ಗೆ ವಿಸ್ತøತ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.
ಈ ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…