ಸಿನಿಮಾ

ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸ್ಸಿದ ಭಾರತೀಯಾ ಸಿನಿಮಾ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ..

158

ಬಾಲಿವುಡ್‌ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್‌ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್‌ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.

ಕಳೆದ ವಾರ ಚೀನಾದ ಪ್ರಮುಖ ನಗರಗಳಲ್ಲಿ ಬಿಡುಗಡೆಗೊಂಡಿರುವ ‘ಸೀಕ್ರೆಟ್ ಸೂಪರ್‌ಸ್ಟಾರ್’, ಮೂರೇ ದಿನಗಳಲ್ಲಿ 174 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಆ ಮೂಲಕ ಮೊದಲವಾರದ ಗಳಿಕೆಯಲ್ಲಿ ಅದು ದಂಗಲ್ ಚಿತ್ರದ ದಾಖಲೆಯನ್ನು ಮುರಿದಿದೆ.

ಅಂದಹಾಗೆ, ಭಾರತದಲ್ಲಿಯೂ ‘ಸೀಕ್ರೆಟ್ ಸೂಪರ್‌ಸ್ಟಾರ್’ನ ಮೊದಲ ವಾರದ ಗಳಿಕೆ ಕೇವಲ 30 ಕೋಟಿ ರೂ.ಯಾಗಿತ್ತು. ಕೇವಲ 15 ಕೋಟಿ ವೆಚ್ಚದಲ್ಲಿ ತಯಾರಾಗಿರುವ ‘ಸೀಕ್ರೆಟ್ ಸೂಪರ್‌ಸ್ಟಾರ್’ಗೆ ಚೀನಾ ಪ್ರೇಕ್ಷಕರು ಫಿದಾ ಆಗಿರುವುದು ಬಾಲಿವುಡ್ ಚಿತ್ರಮಂದಿಯನ್ನು ದಂಗುಬಡಿಸಿದೆ.

ಕಳೆದ ವರ್ಷ ಚೀನಾದಲ್ಲಿ ಬಿಡುಗಡೆಗೊಂಡ ದಂಗಲ್ 1,100 ಕೋಟಿ ರೂ. ಬಾಚಿತ್ತು. ಈ ಚಿತ್ರದ ಪ್ರಚಂಡ ಯಶಸ್ಸಿನ ಬಳಿಕ ಆಮಿರ್, ಆ ದೇಶದಲ್ಲೂ ಜನಪ್ರಿಯ ನಟನೆನಿಸಿಕೊಂಡಿದ್ದಾರೆ. ಇದಕ್ಕೂ ಮುಂಚೆ ಆಮಿರ್ ಅಭಿನಯದ 3 ಇಡಿಯಟ್ಸ್ ಹಾಗೂ ಪಿಕೆ ಕೂಡಾ ಭಾರೀ ಯಶಸ್ಸು ಕಂಡಿದ್ದವು.

ದಂಗಲ್ ಹುಡುಗಿ ಝೈರಾವಾಸಿಂ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸೀಕ್ರೆಟ್ ಸೂಪರ್‌ಸ್ಟಾರ್’, ಮುಸ್ಲಿಂ ಬಾಲಕಿಯೊಬ್ಬಳು ಹಲವಾರು ಅಡೆತಡೆಗಳನ್ನು ಮೀರಿ, ಪ್ರಖ್ಯಾತ ಗಾಯಕಿಯಾಗುವ ರೋಚಕ ಕಥೆಯನ್ನು ಹೊಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ವಿಸ್ಮಯ ಜಗತ್ತು

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….