ಸುದ್ದಿ

ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

41

ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?

http://www.dreamstime.com/royalty-free-stock-images-top-computer-companies-world-kiev-ukraine-may-logotype-collection-well-known-technologies-monitor-screen-image41023829

ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .

ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .

ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…