ಸರ್ಕಾರಿ ಯೋಜನೆಗಳು

ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

160

ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ಉಪಯುಕ್ತ ಮಾಹಿತಿ

    ಕೆಲಸ ಇಲ್ದೇ ಇರೋ ಹುಡುಗ,ಹುಡುಗಿಯರೇ ಇಲ್ಲಿ ಗಮನಿಸಿ!ನಿಮ್ಗೆ ಕೆಲಸ ಬೇಕಾದ್ರೆ ಈ ಉದ್ಯೋಗ ಮೇಳಕ್ಕೆ ಹೋಗಿ…

    ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…