News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕವಿ

ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

2181

ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.

 

ಜೀವನ:-

  • ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿಯಾಗಿ ಬಾಳಿ, ತಮ್ಮ ಜೀವಿತಾವಧಿಯಲ್ಲಿ ಸುಮಾರು ೪೨೭ ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು ೪೭. ತಮ್ಮ ೯೬ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು. ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು. ತಾವೇ ಸ್ವತಃ ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು.
  • ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೇಶ್ಯಾ ವಿವಾಹಗಳನ್ನು ಮಾಡಿಸಿದ್ದರು! ಯಕ್ಷಗಾನ ತಂಡಗಳನ್ನು ಕಟ್ಟಿಕೊಂಡು ಶ ವಿದೇಶಗಳಲ್ಲಿ ಈ ಕಲೆಯನ್ನು ಪ್ರಚುರಪಡಿಸಲು ಯತ್ನಿಸಿದರು. ಮಕ್ಕಳಲ್ಲಿದ್ದ ಪ್ರತಿಭೆ ಅರಳಿಸಲು ಪುತ್ತೂರಿನಲ್ಲಿ ಬಾಲವನ ಎಂಬ ಅಸಂಪ್ರದಾ ಯಿಕ ಶೈಕ್ಷಣಿಕ ಕೇಂದ್ರವನ್ನು ತೆರೆದಿದ್ದರು. ಪುತ್ತೂರಿನಲ್ಲಿ ಒಂದು ಮುದ್ರಣಾಲಯ ತೆರೆದು, ತಮ್ಮ ಪುಸ್ತಕಗಳನ್ನು ಮುದ್ರಿಸುತ್ತಿದ್ದರಲ್ಲದೆ, ತಮ್ಮ ಹಲವು ಕಾದಂಬರಿಗಳಿಗೆ ತಾವೆ ಮುಖಪುಟದ ಚಿತ್ರಗಳನ್ನೂ ಬರೆದು ಮುದ್ರಿಸಿದ ಬಹುಮುಖ ಪ್ರತಿಭೆ ಇವರದ್ದು! ಬಹುಶಃ ಮುಖಪುಟ ಚಿತ್ರ ಬರೆದು ಪ್ರಕಟಿಸಿದ ಕನ್ನಡದ ಪ್ರಥಮ ಪ್ರಮುಖ ಸಾಹಿತಿ ಇವರೊಬ್ಬರೇ.

 

ಪರಿಸರ ಹೋರಾಟ:-

ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.

ಕಾದಂಬರಿಗಳು:-

  1. ಅದೇ ಊರು, ಅದೆ ಮರ
  2. ಅಳಿದ ಮೇಲೆ
  3. ಅಂಟಿದ ಅಪರಂಜಿ
  4. ಆಳ, ನಿರಾಳ
  5. ಇದ್ದರೂ ಚಿಂತೆ
  6. ಇನ್ನೊಂದೇ ದಾರಿ
  7. ಇಳೆಯೆಂಬ

ಕವನ ಸಂಕಲನಗಳು:-

  1. ರಾಷ್ಟ್ರಗೀತ ಸುಧಾಕರ
  2. ಸೀಳ್ಗವನಗಳು

ಸಣ್ಣ ಕತೆ:-

  • ಕವಿಕರ್ಮ
  • ತೆರೆಯ ಮರೆಯಲ್ಲಿ
  • ಹಸಿವು
  • ಹಾವು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಸ್ಪೂರ್ತಿ

    ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

    ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…