ಕವಿ

ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

2153

ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.

 

ಜೀವನ:-

  • ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿಯಾಗಿ ಬಾಳಿ, ತಮ್ಮ ಜೀವಿತಾವಧಿಯಲ್ಲಿ ಸುಮಾರು ೪೨೭ ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು ೪೭. ತಮ್ಮ ೯೬ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು. ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು. ತಾವೇ ಸ್ವತಃ ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು.
  • ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೇಶ್ಯಾ ವಿವಾಹಗಳನ್ನು ಮಾಡಿಸಿದ್ದರು! ಯಕ್ಷಗಾನ ತಂಡಗಳನ್ನು ಕಟ್ಟಿಕೊಂಡು ಶ ವಿದೇಶಗಳಲ್ಲಿ ಈ ಕಲೆಯನ್ನು ಪ್ರಚುರಪಡಿಸಲು ಯತ್ನಿಸಿದರು. ಮಕ್ಕಳಲ್ಲಿದ್ದ ಪ್ರತಿಭೆ ಅರಳಿಸಲು ಪುತ್ತೂರಿನಲ್ಲಿ ಬಾಲವನ ಎಂಬ ಅಸಂಪ್ರದಾ ಯಿಕ ಶೈಕ್ಷಣಿಕ ಕೇಂದ್ರವನ್ನು ತೆರೆದಿದ್ದರು. ಪುತ್ತೂರಿನಲ್ಲಿ ಒಂದು ಮುದ್ರಣಾಲಯ ತೆರೆದು, ತಮ್ಮ ಪುಸ್ತಕಗಳನ್ನು ಮುದ್ರಿಸುತ್ತಿದ್ದರಲ್ಲದೆ, ತಮ್ಮ ಹಲವು ಕಾದಂಬರಿಗಳಿಗೆ ತಾವೆ ಮುಖಪುಟದ ಚಿತ್ರಗಳನ್ನೂ ಬರೆದು ಮುದ್ರಿಸಿದ ಬಹುಮುಖ ಪ್ರತಿಭೆ ಇವರದ್ದು! ಬಹುಶಃ ಮುಖಪುಟ ಚಿತ್ರ ಬರೆದು ಪ್ರಕಟಿಸಿದ ಕನ್ನಡದ ಪ್ರಥಮ ಪ್ರಮುಖ ಸಾಹಿತಿ ಇವರೊಬ್ಬರೇ.

 

ಪರಿಸರ ಹೋರಾಟ:-

ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.

ಕಾದಂಬರಿಗಳು:-

  1. ಅದೇ ಊರು, ಅದೆ ಮರ
  2. ಅಳಿದ ಮೇಲೆ
  3. ಅಂಟಿದ ಅಪರಂಜಿ
  4. ಆಳ, ನಿರಾಳ
  5. ಇದ್ದರೂ ಚಿಂತೆ
  6. ಇನ್ನೊಂದೇ ದಾರಿ
  7. ಇಳೆಯೆಂಬ

ಕವನ ಸಂಕಲನಗಳು:-

  1. ರಾಷ್ಟ್ರಗೀತ ಸುಧಾಕರ
  2. ಸೀಳ್ಗವನಗಳು

ಸಣ್ಣ ಕತೆ:-

  • ಕವಿಕರ್ಮ
  • ತೆರೆಯ ಮರೆಯಲ್ಲಿ
  • ಹಸಿವು
  • ಹಾವು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ʼಮೊಬೈಲ್‍‌ʼ ನಲ್ಲಿ ಇನ್ಮುಂದೆ ಸಿಗಲ್ಲ ಗೂಗಲ್ ಪ್ಲೇ ಸ್ಟೋರ್…..?

    ಹುವಾವೇ ಮೊಬೈಲ್‍ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್‍ ಗಳಿಗೆ ಗೂಗಲ್ ಪ್ಲೇ, ಗೂಗಲ್‍ ಪ್ಲೇ ಸ್ಟೋರ್, ಜಿ ಮೇಲ್‍, ಗೂಗಲ್‍ ಮ್ಯಾಪ್‍ ಹಾಗೂ ಯೂಟೂಬ್‍ ಆಪ್‍ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್‍ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್‍ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಉದ್ಯೋಗ

    ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

    ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.