ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಭದ್ರತಾ ಕಾರಣಗಳಿಗಾಗಿ ಬಾಬಾ ಬಂಧಿಯಾಗಿರುವ ರೋಹ್ಟಕ್ ಜೈಲಿನಲ್ಲೇ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಯಿತು. ಶಿಕ್ಷೆಯ ಪ್ರಮಾಣ ವಿಚಾರದಲ್ಲಿ ತಮ್ಮ ತಮ್ಮ ವಾದ ಮಂಡಿಸಲು ಎರಡೂ ಕಡೆಯ ವಕೀಲರಿಗೆ ಅವಕಾಶ ನೀಡಲಾಯಿತು.
ರೋಹ್ತಕ್ ಜೈಲಿನಿಂದಲೇ ಸಂಜೆ 3.20ರ ವೇಳೆಗೆ ಬಾಬಾ ರಾಮ್ ರಹೀಂಗೆ ಶಿಕ್ಷೆ ಪ್ರಮಾಣವನ್ನು ನ್ಯಾಯಾಧೀಶ ಜಗದೀಪ್ ಸಿಂಗ್ ಪ್ರಕಟಿಸಿದರು.
ಬಾಬಾನಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲು ಪಂಚಕುಲಾದ ಸಿಬಿಐ ಕೋರ್ಟ್, 250 ಕಿಲೋಮೀಟರ್ ದೂರದ ರೋಹ್ಟಕ್ನ ಸೊನಾರಿಯಾ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಆಗಿತ್ತು. ನ್ಯಾಯಾಧೀಶ ಜಗದೀಪ್ ಸಿಂಗ್ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ ಜೈಲಿಗೆ ಆಗಮಿಸಿದ್ದರು.
ತಮ್ಮ ವಾದ ಮಂಡಿಸಿದ ಸರ್ಕಾರಿ ವಕೀಲರು, ಬಾಬಾಗೆ ಜೀವಾವಧಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಅತ್ತ, ಬಾಬಾ ಪರ ವಕೀಲರು ಬಾಬಾ ಮಾಡಿರುವ ಸಮಾಜ ಕಲ್ಯಾಣ ಕಾರ್ಯಗಳನ್ನು ಪರಿಗಣಿಸಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಮನವಿ ಸಲ್ಲಿಸಿದರು.
ನ್ಯಾಯಮೂರ್ತಿಗಳಿಂದ ಶಿಕ್ಷೆ ಪ್ರಕಟ :-
ನ್ಯಾಯಮೂರ್ತಿ ಜಗದೀಪ್ ಸಿಂಗ್ ಅವರು, ಐಪಿಸಿ ಸೆಕ್ಷನ್ 376, 506, 511ರ ಪ್ರಕಾರ, ಶಿಕ್ಷೆಯನ್ನು ಪ್ರಕಟಿಸಿದರು. ಐಪಿಸಿ ಸೆಕ್ಷನ್ 376ರ ಪ್ರಕಾರ ಅತ್ಯಾಚಾರ, ಸೆಕ್ಷನ್ 506ರ ಪ್ರಕಾರ ಜೀವ ಬೆದರಿಕೆ ಹಿನ್ನೆಲೆಯಲ್ಲಿ 10 ವರ್ಷ ಜೈಲು ವಾಸವನ್ನು ವಿಧಿಸಲಾಯಿತು.
ತೀರ್ಪಿನ ಹಿನ್ನಲೆಯಲ್ಲಿ ಜೈಲಿನ ಸುತ್ತ ಮುತ್ತಾ ಭದ್ರತಾ ವ್ಯವಸ್ಥೆ:-
ತೀರ್ಪಿನ ಹಿನ್ನಲೆಯಲ್ಲಿ ರೋಹ್ಟಕ್ ಜೈಲಿನ ಸುತ್ತ ಏಳು ಸುತ್ತಿನ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಜೈಲಿನಿಂದ 10 ಕಿಲೋ ಮೀಟರ್ ದೂರದವರೆಗೂ 17 ಸಾವಿರಕ್ಕೂ ಹೆಚ್ಚು ಸೇನಾ ಹಾಗೂ ಅರೆಸೇನಾ ಭದ್ರತಾ ಸಿಬ್ಬಂದಿ, ಪೊಲೀಸರನ್ನು ನೇಮಿಸಲಾಗಿತ್ತು. ಜೈಲಿನ ಸುತ್ತಮುತ್ತಾ ನಿಷೇಧಾಜ್ಞೆ ಜಾರಿಯಾಗಿದ್ದು, ಜಿಲ್ಲಾಧಿಕಾರಿ ಅವರು ಕಂಡಲ್ಲಿ ಗುಂಡಿಗೆ ಆದೇಶ ನೀಡಿದ್ದರು.
ಹರಿಯಾಣದಾದ್ಯಂತ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಸೋನೆಪತ್ ಬಳಿ ಬಾಬಾ ಬೆಂಬಲಿಗರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಬಡಿಗೆ, ಕಬ್ಬಿಣದ ಸರಳು, ಚೈನು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಇದೂವರೆಗೂ 150ಕ್ಕೂ ಹೆಚ್ಚು ಬಾಬಾನ ಪುಂಡ ಭಕ್ತರನ್ನು ಬಂಧಿಸಿರುವ ಪೊಲೀಸರು ಸಿರ್ಸಾ ಆಶ್ರಮದೊಳಗೆ ಇನ್ನೂ 10 ಸಾವಿರ ಬಾಬಾ ಬೆಂಬಲಿಗರಿದ್ದು, 24 ಗಂಟೆಯೊಳಗೆ ಖಾಲಿ ಮಾಡುವಂತೆ ಖಡಕ್ ಸೂಚನೆ ಕೂಡ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…