ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!