ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.
ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..
ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.
ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.
ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.
ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.
ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.
ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.
ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.
ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.
ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.
ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.