ಜೀವನಶೈಲಿ

ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

1162

ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.

ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ  ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..

ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.

ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ  ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.

1.ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ  ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.

2.ಬೊಜ್ಜಿನ ಸಮಸ್ಯೆಯಿಂದ ಮುಕ್ತಿ

ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ  ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.

3.ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.

ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ  ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ  ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ  ಭಾವನೆಯಾಗಿತ್ತು.

4.ವಯಸ್ಸನ್ನು ಮರೆಮಾಚುತ್ತದೆ

ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ  ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

5.ಹೃದಯದ ಆರೋಗ್ಯ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಿಸುತ್ತದೆ

ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ  ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.

6.ಮಾರಕ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ

ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.

7. ಥೈರಾಯ್ಡ್ ಉಪಶಮನದಲ್ಲಿ ಪರಿಣಾಮಕಾರಿ

ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು  ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

8.ಚರ್ಮರೋಗ ಸಮಸ್ಯೆಯಲ್ಲೂ ಪರಿಣಾಮಕಾರಿ

ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.

9.ರಕ್ತ ಹೀನತೆ ಸಮಸ್ಯೆ ದೂರ

ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ  ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ.  ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…