ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.
ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..
ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.
ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.
ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.
ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.
ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.
ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.
ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.
ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.
ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.
ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…