News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜೀವನಶೈಲಿ

ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

1173

ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.

ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ  ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..

ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.

ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ  ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.

1.ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ  ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.

2.ಬೊಜ್ಜಿನ ಸಮಸ್ಯೆಯಿಂದ ಮುಕ್ತಿ

ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ  ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.

3.ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.

ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ  ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ  ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ  ಭಾವನೆಯಾಗಿತ್ತು.

4.ವಯಸ್ಸನ್ನು ಮರೆಮಾಚುತ್ತದೆ

ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ  ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

5.ಹೃದಯದ ಆರೋಗ್ಯ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಿಸುತ್ತದೆ

ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ  ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.

6.ಮಾರಕ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ

ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.

7. ಥೈರಾಯ್ಡ್ ಉಪಶಮನದಲ್ಲಿ ಪರಿಣಾಮಕಾರಿ

ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು  ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

8.ಚರ್ಮರೋಗ ಸಮಸ್ಯೆಯಲ್ಲೂ ಪರಿಣಾಮಕಾರಿ

ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.

9.ರಕ್ತ ಹೀನತೆ ಸಮಸ್ಯೆ ದೂರ

ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ  ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ.  ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ʼಮೊಬೈಲ್‍‌ʼ ನಲ್ಲಿ ಇನ್ಮುಂದೆ ಸಿಗಲ್ಲ ಗೂಗಲ್ ಪ್ಲೇ ಸ್ಟೋರ್…..?

    ಹುವಾವೇ ಮೊಬೈಲ್‍ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್‍ ಗಳಿಗೆ ಗೂಗಲ್ ಪ್ಲೇ, ಗೂಗಲ್‍ ಪ್ಲೇ ಸ್ಟೋರ್, ಜಿ ಮೇಲ್‍, ಗೂಗಲ್‍ ಮ್ಯಾಪ್‍ ಹಾಗೂ ಯೂಟೂಬ್‍ ಆಪ್‍ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್‍ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್‍ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…

  • ಸಂಬಂಧ

    ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

    ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…