News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜೀವನಶೈಲಿ

ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

1168

ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು.

ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ  ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ..

ಹೌದು, ದಿನ ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ.

ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ  ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಪಟ್ಟಿ ಇಲ್ಲಿದೆ.

1.ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಅಂತೆಯೇ  ಹೊಟ್ಟೆಯೊಳಗಿನ ಉರಿಯನ್ನು ನಿಯಂತ್ರಿಸುತ್ತದೆ. ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.

2.ಬೊಜ್ಜಿನ ಸಮಸ್ಯೆಯಿಂದ ಮುಕ್ತಿ

ಬೊಜ್ಜಿನಿಂದ ಬಳಲುತ್ತಿರುವ ಮಂದಿ ನಿತ್ಯ ಡಯಟ್ ಹಾಗೂ ವ್ಯಾಯಾಮ ಮಾಡಿದರೂ ತೂಕ ಇಳಿಕೆಯಾಗುತ್ತಿಲ್ಲ ಎಂದು ದುಃಖ ಪಡುತ್ತಾರೆ. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ  ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.

3.ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ

ತಾಮ್ರದ ಅಂಶ ಮಾನವನ ದೇಹದಲ್ಲಿ ರೋಗ ನಿರೋಧಕ ಅಂಶವನ್ನು ಹೆಚ್ಚಿಸುತ್ತದೆ. ಆ ಮೂಲಕ ಯಾವುದೇ ರೋಗಗಳು ಸುಲಭವಾಗಿ ದೇಹಕ್ಕೆ ತಾಗದಂತೆ ನೋಡಿಕೊಳ್ಳುತ್ತದೆ.

ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ  ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ  ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ  ಭಾವನೆಯಾಗಿತ್ತು.

4.ವಯಸ್ಸನ್ನು ಮರೆಮಾಚುತ್ತದೆ

ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಅಂತೆಯೇ ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ  ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

5.ಹೃದಯದ ಆರೋಗ್ಯ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಿಸುತ್ತದೆ

ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ  ನೋಡಿಕೊಳ್ಳುತ್ತದೆ. ಅಮೆರಿಕನ್ ವೈದ್ಯರು ಹೇಳಿರುವಂತೆ ತಾಮ್ರ ಬಿಪಿಯನ್ನು ಕೂಡ ನಿಯಂತ್ರಣದಲ್ಲಿಡುತ್ತದೆಯಂತೆ.

6.ಮಾರಕ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ

ಇನ್ನು ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಅಂತೆಯೇ ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.

7. ಥೈರಾಯ್ಡ್ ಉಪಶಮನದಲ್ಲಿ ಪರಿಣಾಮಕಾರಿ

ಪ್ರಸ್ತುತ ಸಮಾಜದಲ್ಲಿ ಸಾಮಾನ್ಯವಾಗಿರುವ ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು  ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

8.ಚರ್ಮರೋಗ ಸಮಸ್ಯೆಯಲ್ಲೂ ಪರಿಣಾಮಕಾರಿ

ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು ಎಂದು ವೈದ್ಯರು ಹೇಳಿದ್ದಾರೆ.

9.ರಕ್ತ ಹೀನತೆ ಸಮಸ್ಯೆ ದೂರ

ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಅಂಶ ದೇಹದ ಬೊಜ್ಜನ್ನು ನಿಯಂತ್ರಿಸುವ ಮೂಲಕ ದೇಹ ಸದಾಕಾಲ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಅಂತೆಯೇ ಹೃದಯ  ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ.  ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…