ಆಧ್ಯಾತ್ಮ

ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

5758

ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.

ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.

ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….

1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.

2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ  :-

ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.

3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-

ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.

4. ಬೇಳೆಯನ್ನುಕೊಳ್ಳಬೇಡಿ:-

ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.


5. ಕಪ್ಪು ಬಣ್ಣದ ಬಟ್ಟೆ:-

ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.

6. ಸಾಸಿವೆ ಕೊಳ್ಳಬಾರದು:-

ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.

7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-

ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…