ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…