News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

166

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್‍ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಗ್ಯಾಜೆಟ್

    ಹೆಚ್ಚು ಫೋನ್ ಬಳಸುತ್ತಿರಾ,ಹಾಗಾದ್ರೆ ತಕ್ಷಣ ನಿಲ್ಲಿಸಿ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…