ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…