ಆರೋಗ್ಯ

ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1392

ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.

ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.

ಕ್ಯಾನ್ಸರ್ ರೋಗ ನಿಯಂತ್ರಣ:

ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.

ಹೃದಯ ರೋಗಗಳು ಶಮನ:-

ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.

ದಂತ ರಕ್ಷಣೆಗೆ ಸಹಕಾರಿ:-

ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್‍ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.

ನವಚೈತನ್ಯ:-

ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…