ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…