ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.
ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್ಪ್ಯಾಕ್ ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಚ್ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ಗಳು-ಎಲ್ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…