News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

281

ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ ಇದು.

ರುಚಿ-ಆರೋಗ್ಯ-ಸೌಂದರ್ಯವರ್ಧಕ :

ರುಚಿ-ಆರೋಗ್ಯ-ಸೌಂದರ್ಯವರ್ಧನೆ ಈ ಮೂರು ಪ್ರಮುಖ ಅಂಶಗಳ ಅಪರೂಪದ ಸಂಯೋಜನೆ ಇದು. ವಿಶೇಷವಾಗಿ ಸಿಹಿ ತಿಂಡಿಗಳ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಉಚಿಕರ ಮತ್ತು ಸ್ವಾದಿಷ್ಟವಾಗಿರುವ ಬಾದಾಮಿ ಅಧಿಕ ಪೌಷ್ಠಿಕಾಂಶಗಳ ಗುಣಗಳನ್ನು ಹೊಂದಿದೆ. ಇದು ವಿಟಮಿನ್ ಇ, ಕ್ಯಾಲ್ಷಿಯಂ, ಫಾಸ್ಫರಸ್, ಕಬ್ಬಿಣ ಮತ್ತು ಮ್ಯಾಗ್ನಿಷಿಯಂನಿಂದ ಸಮೃದ್ಧವಾಗಿದೆ. ಇದರಲ್ಲಿ ಸತು, ಸೆಲೆನಿಯಂ, ತಾಮ್ರ ಮತ್ತು ನಿಯಾಸಿನ್ ಸಹ ಇದೆ.

ಇತರೆ ಎಲ್ಲ ಶುಷ್ಕಫಲಗಳು ಮತ್ತು ಬೀಜ-ಕಾಯಿಗಳಿಗೆ ಹೋಲಿಸಿದಲ್ಲಿ ಪೋಷಕಾಂಶಗಳು ಮತ್ತು ಪ್ರಯೋಜನಕಾರಿ ಅಂಶಗಳು ಹೆಚ್ಚಾಗಿರುವುದು ಬಾದಾಮಿಯಲ್ಲೇ. ಬಾದಾಮಿ ಒಂದು ಅದ್ಭುತ ಸೌಂದರ್ಯವರ್ಧಕ. ಬಹು ಹಿಂದಿನಿಂದಲೂ ಇದನ್ನು ಚರ್ಮ,ತ್ವಚೆ ರಕ್ಷಣೆ, ಕೂದಲ ಆರೈಕೆಗೆ ಬಳಸಲಾಗುತ್ತಿದೆ. ಅನೇಕ ಪ್ರಸಿದ್ಧ ಕಂಪನಿಗಳು ತನ್ನ ಬ್ರಾಂಡ್ ಹೆಸರಿನಲ್ಲಿ ಸೋಪು, ಶಾಂಪೂ, ಹೇರ್ ಆಯಿಲ್, ಫೇಸ್‌ಪ್ಯಾಕ್  ಇತ್ಯಾದಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು. ಅಪಾರ ಬೇಡಿಕೆ ಇದೆ.

ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ:

ಬಾದಾಮಿ ನಾಲಿಗೆಗೆ ರುಚಿಕರ ಮತ್ತು ದೇಹಾರೋಗ್ಯಕ್ಕೆ ಹಿತಕರ. ಮೆದುಳು ಆರೋಗ್ಯ ವೃದ್ಧಿ, ಮೂಳೆ ಬಲವರ್ಧನೆ, ಕೊಲೆಸ್ಟ್ರಾಲ್ ನಿಯಂತ್ರಣ ಮತ್ತು ಮಲಬದ್ದತೆ ನಿವಾರಣೆಗೆಇದು ಸಹಕಾರಿ. ಇದು ಅದ್ಭುತ ಪಥ್ಯಾಹಾರವೂ ಹೌದು. ಅಲ್‌ಝಮೈರ್ ರೋಗ ತಡೆಗಟ್ಟುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಬಾದಾಮಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸಿದಾಗ ರೊಮ್ಯಾಂಟಿಕ್ ಮೂಡ್ ಹೆಚ್ಚಾಗುತ್ತದೆ.

ಮೆದುಳು ಆರೋಗ್ಯ ವರ್ಧನೆ :

ಬಾದಾಮಿಯಲ್ಲಿ ಅನೇಕ ಪೌಷ್ಠಿಕಾಂಶಗಳ ಮೂಲಗಳಿದ್ದು, ಮೆದುಳಿನ ವಿಕಾಸ ಮತ್ತು ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ. ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳಿಗೆ ಸಂತುಲಿತ ಪ್ರಮಾಣದಲ್ಲಿ ಬಾದಾಮಿ ನೀಡುವುದರಿಂದ ಅವರ ಮೆದುಳಿನ ಬೆಳವಣಿಗೆ ಜೊತೆಗೆ ಅವರ ಬುದ್ಧಿಮತ್ತೆಯೂ ವೃದ್ಧಿಯಾಗುತ್ತದೆ. ಇದರಲ್ಲಿ ಮೆದುಳಿನ ಕಾರ್ಯಕ್ಕೆ ಪ್ರಯೋಜನವಾಗುವ ರಿಬೋಫ್ಲಾವಿನ್ ಮತ್ತು ಎಲ್-ಕಾರಿಟೈನ್ ಎಂಬ ಪೌಷ್ಠಿಕಾಂಶಗಳಿವೆ. ಇದು ಮೆದುಳಿನಲ್ಲಿರುವ ನರಗಳ ಕ್ರಿಯಾ ಚಟುವಟಿಕೆಯನ್ನು ವೃದ್ಧಿಗೊಳಿಸುತ್ತದೆ. ಇದರಿಂದ ಅಲ್‌ಝೆಮೈರ್ ರೋಗದ ಸಾಧ್ಯತೆಯನ್ನು ತಡೆಗಟ್ಟುತ್ತದೆ. ಇದರಲ್ಲಿನ ತೈಲವು (ಬಾದಾಮಿ ತೈಲ) ದೇಹದ ಸಮಗ್ರ ಆರೋಗ್ಯ ರಕ್ಷಣೆ ಮತ್ತು ನರಗಳ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿ.

ಕೊಲೆಸ್ಟ್ರಾಲ್ ನಿಯಂತ್ರಣ :

ಬಾದಾಮಿ ಸೇವನೆಯಿಂದ ಆಗುವ ಪ್ರಯೋಜನವೆಂದರೆ ಕೊಲೆಸ್ಟ್ರಾಲ್ ನಿಯಂತ್ರಣ. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ, ಆರೋಗ್ಯಕರ ಕೊಲೆಸ್ಟರಾಲ್ ಅಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್‌ಗಳು-ಎಚ್‌ಡಿಎಲ್ ಹೆಚ್ಚಳಕ್ಕೆ ನೆರವಾಗುತ್ತದೆ. ಇದೇ ವೇಳೆ ಹಾನಿಕರ ಕೊಲೆಸ್ಟರಾಲ್ ಅಂದರೆ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್‌ಗಳು-ಎಲ್‌ಡಿಎಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಸಮತೋಲನವು ಆರೋಗ್ಯಕರ ಕೊಲೆಸ್ಟರಾಲ್ ಮಟ್ಟಕ್ಕೆ ಅತಿ ಮುಖ್ಯ, ಎಲ್‌ಡಿಎಲ್ ಎಂಬ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ದೇಹದಲ್ಲಿ ಕಡಿಮೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸದಾ ತುಂಬಾ ಒಳ್ಳೆಯದು.

ಮೂಳೆ ಆರೋಗ್ಯ ರಕ್ಷಣೆ :

ಬಾದಾಮಿಯಲ್ಲಿ ಅನೇಕಾನೇಕ ಜೀವಸತ್ವಗಳು ಮತ್ತು ಖನಿಜಗಳ ಮೂಲಗಳಿವೆ. ಇದರಲ್ಲಿ ಫಾಸ್ಫರಸ್ ಹೇರಳವಾಗಿದೆ. ಇವೆಲ್ಲವೂ ಮೂಳೆ ಮತ್ತು ಹಲ್ಲುಗಳನ್ನು ಸದೃಢಗೊಳಿಸಿ, ದೀರ್ಘಬಾಳಿಕೆಗೆ ನೆರವಾಗುತ್ತದೆ. ಆಸ್ಟಿಯೋಪೊರೊಸಿಸ್‌ನಂಥ ವಯೋಮಾನ ಸಂಬಂಧಿತ ಟೊಳ್ಳು ಮೂಳೆ ರೋಗ ಅಥವಾ ಮೃದು ಎಲುಬು ಸಮಸ್ಯೆಯನ್ನು ಸಹ ತಡೆಗಟ್ಟಲು ಸಹಕಾರಿ.

ಮಲಬದ್ಧತೆ ನಿವಾರಣೆ :

ಬಾದಾಮಿಯಲ್ಲಿ ನಾರಿನಂಶ ಸಮೃದ್ಧವಾಗಿದೆ. ಇತರ ಫೈಬರ್ ಸಮೃದ್ಧ ಆಹಾರಗಳಂತೆ ಇದು ಮಲಬದ್ಧತೆಯನ್ನು ನಿವಾರಿಸುತ್ತದೆ. ಆದಾಗ್ಯೂ ಬಾದಾಮಿ ಬೀಜಗಳನ್ನು ಸೇವಿಸಿದಾಗ ಸಾಕಷ್ಟು ನೀರು ಕುಡಿಯಬೇಕು. ಇದರಿಂದ ಪಚನ ಪ್ರಕ್ರಿಯೆ ಕ್ಷಿಪ್ರಗೊಳ್ಳುತ್ತದೆ ಹಾಗೂ ಬೀಜದ ಆರೋಗ್ಯಕರ ಪ್ರಯೋಜನವು ದೇಹಕ್ಕೆ ದಕ್ಕಲು ಸಹಾಯಮಾಡುತ್ತದೆ. 4 ರಿಂದ 5 ಬಾದಾಮಿ ಬೀಜಗಳನ್ನು ತಿಂದರೆಜೀರ್ಣ ಕ್ರಿಯೆಗೆ ನೆರವಾಗುತ್ತದೆ.

ಇಷ್ಟೇ ಅಲ್ಲ ಬಾದಾಮಿಯಿಂದ ಸ್ವಾದಿಷ್ಟ ಮತ್ತು ಆರೋಗ್ಯಕರ ಖಾದ್ಯವನ್ನು ತಯಾರಿಸಬಹುದು. ಬಾದಾಮಿ ಹಲ್ವ, ಪಾಯಸ, ಕೀರು, ಐಸ್‌ಕ್ರೀಮ್, ಚಾಕೋಲೆಟ್, ಬಾದಾಮಿ ಬರ್ಫಿ ಇತ್ಯಾದಿ ರುಚಿಕರ ತಿನಿಸುಗಳ ರುಚಿಯನ್ನು ಬಾದಾಮಿ ಹೆಚ್ಚಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…