News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

244

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:06:03
ಸೂರ್ಯಾಸ್ತ18:47:16
ಹಗಲಿನ ಅವಧಿ12:41:12
ರಾತ್ರಿಯ ಅವಧಿ11:17:56
ಚಂದ್ರೋದಯ07:04:48
ಚಂದ್ರಾಸ್ತ20:10:53

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ದ್ವಿತೀಯ
ನಕ್ಷತ್ರ : ಭರಣಿ
ಯೋಗ : ಪ್ರೀತಿ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ

ಮುಹೂರ್ತ

ರಾಹು ಕಾಲ15:37 – 17:12ಅಶುಭ
ಯಮಘಂಡ ಕಾಲ09:16 – 10:52ಅಶುಭ
ಗುಳಿಕ ಕಾಲ12:27 – 14:02
ಅಭಿಜಿತ್12:01 -12:52ಶುಭ
ದುರ್ಮುಹೂರ್ತ08:38 – 09:29ಅಶುಭ
ದುರ್ಮುಹೂರ್ತ23:19 – 24:10*ಅಶುಭ

ಮೇಷ:-

ನಿಮ್ಮ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಹೆಚ್ಚು. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.

ವೃಷಭ:-

ಉತ್ತಮ ವಾಕ್ ಚತುರ್ಯರಾದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಸಿಗುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.

ಮಿಥುನ:

ವಿವಿಧ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.

ಕಟಕ :-

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳ್ಳೆಯದು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸ. ಆದ ಘಟನೆಯನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.

 ಸಿಂಹ:

ಮನಸ್ಸನ್ನು ನಿರ್ಧರಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.

ಕನ್ಯಾ :-

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಸ್ನೇಹಿತರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.

ತುಲಾ:

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಪ್ರತಿಯೊಂದಕ್ಕು ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.

ವೃಶ್ಚಿಕ :-

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವ್ಯಾಪಾರದಲ್ಲಿ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಧನಸ್ಸು:

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ಕೌಶಲ್ಯಕ್ಕೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು.

ಮಕರ :-

ಸಂಶೋಧಕರಿಗೆ ತಾಂತ್ರಿಕ ಪರಿಣಿತರಿಗೆ ಒಳ್ಳೆಯ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.

ಕುಂಭ:-

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.

ಮೀನ:-

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ಸುದ್ದಿ

    ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿವರೆಗೂ ಈ ಗ್ರಾಮದಲ್ಲಿ ಒಂದೇ ಒಂದು ಅಪರಾಧ ಪ್ರಕರಣ ನಡೆದಿಲ್ಲ..!ಯಾವುದೇ ಕೇಸ್ ದಾಖಲಾಗಿಲ್ಲ!ನಮ್ಮ ಪಕ್ಕದಲ್ಲೇ ಇದೇ ಆ ಊರು.ತಿಳಿಯಲು ಈ ಲೇಖನ ಓದಿ…

    ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…