ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

416

ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.

ವೃಷಭ:-

ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.

ಮಿಥುನ:

ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫ‌ಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.

ಕಟಕ :-

ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.

 

 ಸಿಂಹ:

ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.

ಕನ್ಯಾ :-

ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.

ತುಲಾ:

ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.

ವೃಶ್ಚಿಕ :-

ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.

 

ಧನಸ್ಸು:

ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.

ಮಕರ :-

ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.

ಕುಂಭ:-

ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.  ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.

ಮೀನ:-

ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಆರೋಗ್ಯ

    ಈ ಹಣ್ಣಿನಿಂದ ಒಬ್ಬರ ಜೀವ ಉಳಿಸಬಹುದು, ಹಲವರಿಗೆ ಗೊತ್ತಿಲ್ಲ ಈ ಅದ್ಬುತ ಹಣ್ಣಿನ ಬಗ್ಗೆ. ಈ ಅರೋಗ್ಯ ಮಾಹಿತಿ ನೋಡಿ.

    ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…